ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಕೂಡಿಟ್ಟ ಹಣವನ್ನು ಸುರಕ್ಷಿತವಾಗಿ ಕಾಪಾಡುವ ಚಿಂತೆ ಕಾಡಲಿದೆ. ಸಾಂಸಾರಿಕವಾಗಿ ಹಿರಿಯರೊಂದಿಗೆ ಭಿನ್ನಾಭಿಪ್ರಾಯ ಮೂಡಬಹುದು. ಅನಿರೀಕ್ಷಿತವಾಗಿ ಬಂಧುಮಿತ್ರರ ಆಗಮನವಾಗಲಿದೆ.ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಕೆಳಹಂತದ ನೌಕರ ವರ್ಗದವರಿಗೆ ಬಡ್ತಿ, ಮುನ್ನಡೆ ಯೋಗವಿದೆ. ಆರ್ಥಿಕವಾಗಿ ಸುಧಾರಣೆ ಕಂಡುಬರಲಿದೆ. ಮಕ್ಕಳ ವಿವಾಹ ಪ್ರಯತ್ನಕ್ಕೆ ಫಲ ದೊರಕೀತು. ದೇವತಾ ಪ್ರಾರ್ಥನೆ ಮಾಡಿ.ಮಿಥುನ: ಕಾರ್ಯನಿಮಿತ್ತ ನಿರಂತರ ಪ್ರಯಾಣ ಮಾಡುವುದರಿಂದ ದೇಹಾರೋಗ್ಯ ಕೈಕೊಟ್ಟೀತು. ಮಕ್ಕಳ ವಿವಾಹ