ಮೈಸೂರು : ನಾಡಹಬ್ಬ ದಸರಾ ಮಹೋತ್ಸವಕ್ಕೆ ಇಂದಿನಿಂದ ಚಾಲನೆ ದೊರೆತಿದ್ದು, ಚಾಮುಂಡಿ ದೇವಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಇನ್ಫೋಸಿಸ್ ಸಂಸ್ಥಾಪಕಿ ಡಾ. ಸುಧಾ ಮೂರ್ತಿ ಉದ್ಘಾಟಿಸಿದ್ದಾರೆ. ನಾಡಿನಲ್ಲಿ ವೈಭವದಿಂದ ಮಾಡುವ ಈ ಉತ್ಸವವನ್ನು ರಾಜ್ಯ ಸರ್ಕಾರವೇ ಮುಂದೆ ನಿಂತು ಆಚರಿಸಬೇಕು. ಆದರೆ ದಸರಾ ಉದ್ಘಾಟನೆ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಸೇರಿದಂತೆ ಕಾಂಗ್ರೆಸ್ನ ಯಾವ ಜನಪ್ರತಿನಿಧಿಗಳು ಹಾಜರಾಗದೆ, ದೂರವೇ ಉಳಿದಿದ್ದಾರೆ.