ಒಂದೆಡೆ ಅತೀ ಮಳೆಯಿಂದಾಗಿ ಬೆಳೆದ ಬೆಳೆಗಳೆಲ್ಲ ನಾಶವಾದರೆ, ಇನ್ನೊಂದೆಡೆ ಅಲ್ವ ಸ್ವಲ್ಪ ಅಳಿದು ಉಳಿದ ಬೆಳೆಗಳನ್ನು ಕಾಡಾನೆ ದಾಳಿಯಿಂದ ಉಳಿಸಿಕೊಳ್ಳಲಾಗದೆ ಬೆಳೆಗಾರ ಸಂಕಷ್ಟದ ಪರಿಸ್ಥಿತಿ ಎದುರಿಸುವಂತಾಗಿದೆ.ಮಲೆನಾಡಿನ ರೈತರು ಒಂದೆಡೆ ಮಳೆಯಿಂದ ಈಗಾಗಲೇ ಕಂಗಲಾಗಿದ್ದಾರೆ. ಈಗ ವನ್ಯಪ್ರಾಣಿಗಳ ಹಾವಳಿಯಿಂದ ಮತ್ತಷ್ಟು ಸಂಕಷ್ಟಕ್ಕೆ ಈಡಾಗುವಂತೆ ಆಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಗುತ್ತಿಹಳ್ಳಿ, ಮೂಲರಹಳ್ಳಿ, ಬೈರಾಪುರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ಒಂದು ವಾರದಿಂದ ಕಾಡಾನೆಗಳು ಬೀಡು ಬಿಟ್ಟಿವೆ. ಕಾಡಾನೆ ಹಾವಳಿಯಿಂದ ಬಾಳೆ, ಕಾಫಿ, ಮೆಣಸು,