ಹೊರ ರಾಜ್ಯದ ಯುವತಿಯರನ್ನು ಬಳಸಿಕೊಂಡು ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದ ಘಟನೆ ಚಿತ್ರದುರ್ಗದಲ್ಲಿ ಕಂಡು ಬಂದಿದೆ.. ಜಿಲ್ಲೆಯ ಹೊಳಲ್ಕೆರೆ ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಹಿಂಭಾಗದ ಲಾಡ್ಜ್ ಮೇಲೆ ಮೈಸೂರು ಒಡನಾಡಿ ಸೇವಾ ಸಂಸ್ಥೆ ಪೊಲೀಸರ ಸಹಕಾರದೊಂದಿಗೆ ದಾಳಿ ನಡಿಸಿ ಮೂವರು ಪುರುಷರು, ಓರ್ವ ಯುವತಿಯನ್ನು ವಶಕ್ಕೆ ಪಡೆದಿದ್ದಾರೆ..ಮೈಸೂರು ಒಡನಾಡಿ ಸಂಸ್ಥೆ ಖಚಿತ ಮಾಹಿತಿ ಪಡೆದು ಚಿತ್ರದುರ್ಗ ಡಿಸಿಐಬಿ ಇನ್ಸ್ಪೆಕ್ಟರ್ ಕಿರಣ್ ಕುಮಾರ್ ನೇತೃತ್ವದಲ್ಲಿ ಪ್ರಜ್ವಲ್ ಲಾಡ್ಜ್ ಮೇಲೆ ದಾಳಿ ನಡೆಸಲಾಯ್ತು..