ಸೇವೆ ಖಾಯಮಾತಿಗಾಗಿ ಸರ್ಕಾರವನ್ನು ಒತ್ತಾಯಿಸಿ ಅತಿಥಿ ಉಪನ್ಯಾಸಕರು ನಡೆಸುತ್ತಿರುವ ಮುಷ್ಕರ ನಿಲ್ಲಿಸಲು ಸರ್ಕಾರ ಕಠಿಣ ಸೂಚನೆ ನೀಡಿದೆ. ನಾಳೆ ಅಂದರೆ ಜ.1 ರಿಂದ ಸೇವೆಗೆ ಹಾಜರಾಗದಿದ್ದಲ್ಲಿ, ವಿದ್ಯಾರ್ಥಿಗಳ ಹಿತಾಸಕ್ತಿ ದೃಷ್ಟಿಯಿಂದ ಪರ್ಯಾಯ ವ್ಯವಸ್ಥೆಯ ಬಗ್ಗೆ ಚಿಂತಿಸುವುದಾಗಿ ಸರ್ಕಾರ ಎಚ್ಚರಿಕೆ ನೀಡಿದೆ. ಆದರೆ ಸರ್ಕಾರಕ್ಕೆ ಸೆಡ್ಡು ಹೊಡಿದಿರುವ ಅತಿಥಿ ಉಪನ್ಯಾಸಕರು ಸೋಮವಾರ ತುಮಕೂರಿನಿಂದ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳುವ ಮೂಲಕ ತಿರುಗೇಟು ನೀಡಿದ್ದಾರೆ.