ಹೊಸದಿಲ್ಲಿ : ಕೃಷಿ ಕಾಯ್ದೆಗಳ ವಿರುದ್ಧ ದಿಲ್ಲಿಯ ಗಡಿಗಳಲ್ಲಿ ರೈತರ ಪ್ರತಿಭಟನೆಯ ಹಿನ್ನೆಲೆಯಲ್ಲಿ ದಿಲ್ಲಿ-ರಾಷ್ಟ್ರ ರಾಜಧಾನಿ ಪ್ರದೇಶದಲ್ಲಿನ ಹೆದ್ದಾರಿಗಳನ್ನು ನಿರ್ಬಂಧಿಸಿರುವ ಬಗ್ಗೆ ಗುರುವಾರ ಆಕ್ಷೇಪವನ್ನು ವ್ಯಕ್ತಪಡಿಸಿದ ಸರ್ವೋಚ್ಚ ನ್ಯಾಯಾಲಯವು, ನ್ಯಾಯಾಂಗ ವೇದಿಕೆ,ಆಂದೋಲನ ಅಥವಾ ಸಂಸದೀಯ ಚರ್ಚೆಗಳ ಮೂಲಕ ಪರಿಹಾರವನ್ನು ಕಂಡುಕೊಳ್ಳಬಹುದು,ಆದರೆ ಹೆದ್ದಾರಿಗಳನ್ನು ಮುಚ್ಚಲು ಹೇಗೆ ಸಾಧ್ಯ? ಇದು ಶಾಶ್ವತ ಸಮಸ್ಯೆಯಾಗಬಾರದು ಎಂದು ಹೇಳಿತು.