ವಿಜಯಪುರ : ಕರ್ನಾಟಕದ ಸಿಂದಗಿ ಮತ್ತು ಹಾನಗಲ್ ಕ್ಷೇತ್ರಗಳಲ್ಲಿ ಅ.30ರಂದು ಮತದಾನ ನಡೆಯಲಿದೆ. ಇದೊಂದು ಉಪಚುನಾವಣೆ ಎಂದು ಉದಾಸೀನ ಮಾಡಬೇಡಿ. ಇಲ್ಲಿ ಕಾಂಗ್ರೆಸ್ ಸಾಧಿಸುವ ಗೆಲುವಿನಿಂದ ನರೇಂದ್ರ ಮೋದಿಗೆ ಎಚ್ಚರಿಕೆಯ ಸಂದೇಶ ರವಾನಿಸಿದಂತೆ ಆಗುತ್ತದೆ ಎಂದು ರಾಜ್ಯಸಭೆಯ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು.