ಲೇಖನ | ವರ್ಷ ಭವಿಷ್ಯ | ಟ್ಯಾರೋ ಭವಿಷ್ಯ | ಜಾತಕ ಹೊಂದುತ್ತದೆಯೇ | ದಿನ ಭವಿಷ್ಯ | ವಾರ ಭವಿಷ್ಯ | ಮಾಸ ಭವಿಷ್ಯ | ತಾರಾ ಭವಿಷ್ಯ | ನಿಮ್ಮ ಜಾತಕ
ಮುಖ್ಯ ಪುಟ ಜ್ಯೋತಿಷ್ಯ » ಜ್ಯೋತಿಷ್ಯಶಾಸ್ತ್ರ » ಲೇಖನ » ಯಡಿಯೂರಪ್ಪ ಅಧಿಕಾರಕ್ಕೆ ಕುತ್ತು: ಕೋಡಿಮಠ ಶ್ರೀ ಭವಿಷ್ಯ (Karnataka CM Yadiyurappa Lost Power?)
ಲೇಖನ
Feedback Print Bookmark and Share
 
NRB
ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾದ 15 ದಿನಗಳೊಳಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸ್ಥಾನಕ್ಕೆ ಕುತ್ತು ಬರಲಿದೆ. ಒಂದು ವೇಳೆ ತಕ್ಷಣಕ್ಕೆ ಅಪಾಯದಿಂದ ಪಾರಾದರೂ ಡಿಸೆಂಬರ್‌‌ನಲ್ಲಿ ಎದುರಾಗುವ ರಾಜಕೀಯ ಗಂಡಾಂತರದಿಂದ ಯಡಿಯೂರಪ್ಪ ಪಾರಾಗಲು ಸಾಧ್ಯವೇ ಇಲ್ಲ ಎಂದು ಹಾರನಹಳ್ಳಿ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಅವರು ಭವಿಷ್ಯ ನುಡಿದಿದ್ದಾರೆ.

ಯಡಿಯೂರಪ್ಪ ಮುಖ್ಯಮಂತ್ರಿ ಹುದ್ದೆ ಏರಿದ ದಿನದಿಂದಲೂ ರಾಜ್ಯದಲ್ಲಿ ಅವಘಡ, ಗಲಾಟೆ, ಸಾವುಗಳು ನಿರಂತರವಾಗಿ ಸಂಭವಿಸುತ್ತಿವೆ. ಯಡಿಯೂರಪ್ಪ ಅಧಿಕಾರ ಸ್ವೀಕರಿಸಿದ ಘಳಿಗೆಯೇ ಸರಿಯಿಲ್ಲ. ಗಂಡಾಂತರದಿಂದ ಅವರು ಪಾರಾಗಬೇಕಿದ್ದರೆ ಮುಖ್ಯಮಂತ್ರಿಯಾದ 45 ದಿನಗಳಲ್ಲಿ ರಾಜೀನಾಮೆ ನೀಡಿ ಮತ್ತೆ ಅಧಿಕಾರ ಸ್ವೀಕರಿಸಬೇಕಿತ್ತು. ಆ ಕೆಲಸ ಮಾಡಿದ್ದರೆ 10 ವರ್ಷ ಅನಭಿಷಿಕ್ತ ದೊರೆಯಂತಿರಬಹುದಿತ್ತು. ಈಗ ಯಾವ ಶಾಂತಿ ಮಾಡಿಸಿದರೂ ಗಂಡಾಂತರದಿಂದ ಪಾರಾಗಲು ಸಾಧ್ಯವಾಗದು ಎಂದು ಶ್ರೀಗಳು ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದರು.

ರಾಜ್ಯದಲ್ಲಿ 28 ಲೋಕಸಭಾ ಕ್ಷೇತ್ರಗಳ ಪೈಕಿ ಅತಿ ಹೆಚ್ಚು ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ. ಆದರೆ, ಕಾಂಗ್ರೆಸ್ ಮತ್ತು ಜೆಡಿಎಸ್ ಹಿಂದಿನ ಚುನಾವಣೆಗಿಂತ ಹೆಚ್ಚು ಸ್ಥಾನಗಳನ್ನು ಗೆದ್ದುಕೊಂಡು ಪ್ರಬಲವಾಗಲಿದೆ. ರಾಜ್ಯದಲ್ಲಿ ಅನಿರೀಕ್ಷಿತ ರಾಜಕೀಯ ಬೆಳವಣಿಗೆಗಳು ಸಂಭವಿಸುವ ಸಾಧ್ಯತೆಯಿದೆ ಎಂದರು.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಕೋಡಿಮಠ, ಯಡಿಯೂರಪ್ಪ, ಶ್ರೀಶಿವಾನಂದ ಶಿವಯೋಗಿ, ಲೋಕಸಭೆ