ಸುದ್ದಿ/ಗಾಸಿಪ್ | ಸಿನಿಮಾ ಮುನ್ನೋಟ | ಸಿನಿಮಾ ವಿಮರ್ಶೆ | ತಾರಾ ಪರಿಚಯ
ಮುಖ್ಯ ಪುಟ ಮನರಂಜನೆ » ಸ್ಯಾಂಡಲ್ ವುಡ್ » ಸುದ್ದಿ/ಗಾಸಿಪ್ » ಉತ್ತಮ ಕಲಾವಿದನಾಗುವ ಹಂಬಲದ ಚೇತನ್
ಸುದ್ದಿ/ಗಾಸಿಪ್
Feedback Print Bookmark and Share
 
MOKSHENDRA
ಆ ದಿನಗಳು ಚಿತ್ರದ ಮೂಲಕ ಬೆಳಕಿಗೆ ಬಂದ ಚೇತನ್ ಈಗ ಬಿರುಗಾಳಿ ಚಿತ್ರದಲ್ಲಿ ನಟಿಸಿದ್ದಾರೆ. ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದೆ. ಒಂದು ಚಿತ್ರದ ನಂತರ ಒಂದು ವರ್ಷ ಬ್ರೇಕ್ ತಗೊಂಡಿದ್ದಾರೆ. ದೊಡ್ಡ ಸ್ಟಾರ್ ಎನಿಸಿಕೊಳ್ಳಬೇಕೆನ್ನುವ ಆಕಾಂಕ್ಷೆ ನನಗಿಲ್ಲ. ಪ್ರೇಕ್ಷಕರಿಗೆ ಮೆಚ್ಚುಗೆಯಾಗುವಂಥ ಉತ್ತಮ ಕಲಾವಿದನಾಗಿ ರೂಪುಗೊಳ್ಳಬೇಕಷ್ಟೆ. ನಾನು ಉತ್ತಮ ತಂತ್ರಜ್ಞರೊಂದಿಗೆ ಕೆಲಸ ಮಾಡಲು ಇಚ್ಚಿಸುತ್ತೇನೆ ಎನ್ನುತ್ತಾರೆ ಚೇತನ್.

ಬೆಳ್ಳಿತೆರೆಗೆ ತಮ್ಮನ್ನು ಪರಿಚಯಿಸಿದ ಆ ದಿನಗಳು ಚಿತ್ರದ ಬಗ್ಗೆ ಅವರು ತುಂಬಾ ಪ್ರೀತಿಯಿಂದ ಮಾತನಾಡುತ್ತಾರೆ. ಚೊಚ್ಚಲ ಚಿತ್ರದಲ್ಲೇ ಉತ್ತಮ ತಂತ್ರಜ್ಞರೊಂದಿಗೆ ಕೆಲಸ ಮಾಡುವ ಅವಕಾಶ ತಮ್ಮದಾಯ್ತು. ಇದೀಗ ಬಿರುಗಾಳಿ ಚಿತ್ರದಲ್ಲಿ ತಮಗೆ ಎಲ್ಲವೂ ಸಿಕ್ಕಂತಾಗಿದೆ ಎಂದು ಹರ್ಷ ವ್ಯಕ್ತಪಡಿಸುತ್ತಾರೆ.

ಬಿರುಗಾಳಿ ಸಂಪೂರ್ಣ ಮನರಂಜನಾತ್ಮಕ ಕಮರ್ಷಿಯಲ್ ಸಿನಿಮಾ. ಈಗಿನ ಪ್ರೇಕ್ಷಕರಿಗೆ ಏನು ಬೇಕೋ ಎಲ್ಲವೂ ಇಲ್ಲಿದೆ. ಥಿಯೇಟರ್‌ನಲ್ಲಿ ಕುಳಿತ ಪ್ರೇಕ್ಷಕ ಚಿತ್ರದಲ್ಲಿ ಸಂಪೂರ್ಣ ತಲ್ಲೀನನಾಗಿರುತ್ತಾನೆ ಎನ್ನುತ್ತಾರೆ. ಇನ್ನು ಕೆಲವೇ ದಿನಗಳಲ್ಲಿ ಚೇತನ್‌ರ ಮೂರನೇ ಚಿತ್ರ ಸೆಟ್ಟೇರಲಿದೆ. ಆ ದಿನಗಳು ಚಿತ್ರ ನಿರ್ದೇಶನದ ಚೈತನ್ಯ ಈ ಚಿತ್ರವನ್ನು ನಿರ್ದೇಶಿಸುವುದರೊಂದಿಗೆ ಈ ಜೋಡಿ ಮತ್ತೊಮ್ಮೆ ಒಂದಾಗುತ್ತಿದ್ದಾರೆ. ಫೆಬ್ರುವರಿ ವೇಳೆಗೆ ಚಿತ್ರೀಕರಣ ಆರಂಭವಾಗುವ ಸಾಧ್ಯತೆಗಳಿವೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಆ ದಿನಗಳು, ಬಿರುಗಾಳಿ, ಚೇತನ್