ಹುಮ್ನಾಬಾದಿನಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಮೆರಾಜುದ್ದೀನ್ ಪಾಟೀಲ್ ಸೋಲು ಕಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ್ ಬಸವರಾಜ್ ಪಾಟೀಲ್ ಜಯ ಗಳಿಸಿದ್ದಾರೆ. ಈ ಮೂಲಕ ಜೆಡಿಎಸ್ಗೆ ಭಾರಿ ಮುಖಭಂಗವಾಗಿದೆ.
ಬಾಗೇಪಲ್ಲಿಯಲ್ಲಿ ಸಿಪಿಎಂ ಅಭ್ಯರ್ಥಿ ಶ್ರೀರಾಮರೆಡ್ಡಿ ಜಯಗಳಿಸಿದ್ದಾರೆ. ಮಂಗಳೂರು ದಕ್ಷಿಣದಲ್ಲಿ ಬಿಜೆಪಿ ಅಭ್ಯರ್ಥಿ ಯೋಗೀಶ್ ಭಟ್ ಜಯ ಸಾಧಿಸಿದ್ದಾರೆ. ಪದ್ಮನಾಭನಗರದಲ್ಲಿ ಆರ್. ಅಶೋಕ್ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಮಹದೇವ ಪುರದ ಬಿಜೆಪಿ ಅಭ್ಯರ್ಥಿ ಅರವಿಂದ ಲಿಂಬಾವಳಿ ಗೆಲುವು ಸಾಧಿಸಿದ್ದಾರೆ. ಯಲಹಂಕದಲ್ಲಿ ಬಿಜೆಪಿ ಅಭ್ಯರ್ಥಿ ವಿಶ್ವನಾಥ್ ಗೆಲುವು ಸಾಧಿಸಿದ್ದಾರೆ.
ಬಿಜೆಪಿ 21ರಲ್ಲಿ ಗೆಲುವು ಸಾಧಿಸಿದ್ದರೆ, ಕಾಂಗ್ರೆಸ್ 06 ರಲ್ಲಿ ಗೆಲುವು ಸಾಧಿಸಿದೆ. ಹಾಗೆಯೇ ಜೆಡಿಎಸ್ 2ರಲ್ಲಿ ಗೆಲುವು ಸಾಧಿಸಿದೆ. ಪಕ್ಷೇತರ ಒಂದರಲ್ಲಿ ಗೆಲುವು ಸಾಧಿಸಿದೆ. ಕಾರ್ಕಳದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೋಪಾಲ್ ಭಂಡಾರಿ ಜಯ ಸಾಧಿಸಿದ್ದಾರೆ.
ಬಿಜೆಪಿ-113, ಕಾಂಗ್ರೆಸ್-69, ಜೆಡಿಎಸ್ 34, ಇತರೆ-8
|