ಬೆಂಗಳೂರು: ನೆರೆ ಪರಿಹಾರಕ್ಕೆ ಸಂಪನ್ಮೂಲ ಕ್ರೋಡಿಕರಿಸಲು ಅದಿರು ಸಾಗಿಸುವ ಲಾರಿಗಳ ಮೇಲೆ ಸಾವಿರ ರೂಪಾಯಿ ಸುಂಕ ವಿಧಿಸುವ ಪ್ರಸ್ತಾವದ ಕುರಿತು ಚರ್ಚೆ ನಡೆಯುತ್ತಿದ್ದು, ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ನೆರೆ ಸಂತ್ರಸ್ತರಿಗೆ ಮನೆ ನಿರ್ಮಿಸುವ ಸಂಬಂಧ ಗುರುವಾರ ವಿಧಾನಸೌಧದಲ್ಲಿ ಸೇವಾಭಾರತಿ ಕರ್ನಾಟಕ ಸಂಘಟನೆಯ ಪದಾಧಿಕಾರಿಗಳ ಜೊತೆ ಒಡಂಬಡಿಕೆಗೆ ಸಹಿ ಹಾಕಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಷಯದ ಬಗ್ಗೆ ಚರ್ಚೆ ಪ್ರಗತಿಯಲ್ಲಿದೆ.