ನವಿ ಮುಂಬೈ ಮುನ್ಸಿಪಲ್ ಕಾರ್ಪೋರೇಶನ್ನ ಕಾಂಗ್ರೆಸ್ ಕಾರ್ಪೋರೇಟರ್ ಅನಂತ ಕಾಳೆಯವರನ್ನು ನವಿ ಮುಂಬೈಯಲ್ಲಿ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ.
ಕಾಳೆ ಅವರು ನವಿ ಮುಂಬೈ ಮುನ್ಸಿಪಲ್ ಕಾರ್ಪೋರೇಶನ್ನ ಐರೋಲಿ ವಿಭಾಗವನ್ನು ಪ್ರತಿನಿಧಿಸುತ್ತಿದ್ದು, ಬೆಳಿಗ್ಗೆ 9 ಗಂಟೆಗೆ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರ್ಪೋರೇಟರ್ ಅನಂತ ಕಾಳೆಯವರನ್ನು ಮುಂಬೈನ ಮುಳಂದ್ ಆಸ್ಪತ್ರೆಗೆ ಕರೆದೊಯ್ಯಿತ್ತಿರುವ ಸಂದರ್ಭದಲ್ಲಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ
ಕಳೆದ ವರ್ಷ ನವೆಂಬರ್ ತಿಂಗಳಿನಲ್ಲಿ ನ್ಯಾಶನಲ್ ಕಾಂಗ್ರೆಸ್ ಪಕ್ಷದ ಕಾರ್ಪೋರೇಟರ್ ದೇವಿದಾಸ್ ಚೌಗಲೆಯವರನ್ನು ಕುಖ್ಯಾತ ಗ್ಯಾಂಗ್ಸ್ಟರ್ ರವಿ ಪೂಜಾರಿಯ ಗುಂಪು ಗುಂಡಿನಿಂದ ಹತ್ಯೆ ಮಾಡಲಾಗಿತ್ತು.
|