ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಷ್ಟ್ರೀಯ > ಆಡ್ವಾಣಿಗೆ ಚಪ್ಪಲಿ ತೂರಿದ ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಆಡ್ವಾಣಿಗೆ ಚಪ್ಪಲಿ ತೂರಿದ ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ
ಪತ್ರಿಕಾಗೋಷ್ಠಿಯೊಂದರಲ್ಲಿ ಗೃಹ ಸಚಿವ ಚಿದಂಬರಂ ಮೇಲೆ ಸಿಖ್ ಪತ್ರಕರ್ತನೊಬ್ಬ ಬೂಟೆಸೆದ ಘಟನೆ ಹಸಿಹಸಿಯಾಗಿರುವಾಗಲೇ, ಇದೀಗ ಬಿಜೆಪಿ ಪಕ್ಷದ ಪ್ರಧಾನಿ ಅಭ್ಯರ್ಥಿ ಎಲ್.ಕೆ. ಆಡ್ವಾಣಿ ಅವರತ್ತ ಪಕ್ಷದ ಕಾರ್ಯಕರ್ತನೊಬ್ಬ ಚಪ್ಪಲಿ ಎಸೆದ ಘಟನೆ ವರದಿಯಾಗಿದೆ. ಇದರಿಂದಾಗಿ, ಚಪ್ಪಲಿ ಎಸೆಯುವ ಘಟನೆ ರಾಷ್ಟ್ರದಲ್ಲಿ ಸಾಂಕ್ರಾಮಿಕವಾಗತೊಡಗಿದೆ.

ಮಧ್ಯಪ್ರದೇಶದ ಕಾಟ್ನಿಯಲ್ಲಿ ನಡೆಸಿದ ಚುನಾವಣಾ ರ‌್ಯಾಲಿಯಲ್ಲಿ ಕಾಟ್ನಿ ಜಿಲ್ಲಾ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ಪವಾಸ್ ಅಗರ್‌ವಾಲ್ ಎಂಬಾತ ಈ ಕೃತ್ಯ ನಡೆಸಿದ್ದಾನೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಪಕ್ಷದೊಳಗಿನ ಗುಂಪುಗಾರಿಕೆಯಿಂದಾಗಿ ತನ್ನನ್ನು ಜಿಲ್ಲಾಧ್ಯಕ್ಷ ಪದವಿಯಿಂದ ಕಿತ್ತು ಹಾಕಿದ್ದಕ್ಕೆ ಬೇಸರಗೊಂಡು ಆತ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ.

ಆಡ್ವಾಣಿ ಅವರು ವೇದಿಕೆ ಏರಿದ ಕೆಲವೇ ಕ್ಷಣಗಳಲ್ಲಿ ಆತ ಚಪ್ಪಲಿ ತೂರಿದ್ದು, ಅದು ಆಡ್ವಾಣಿ ಅವರ ಪಕ್ಕದಲ್ಲಿ ಬಿತ್ತು ಎಂದು ತಿಳಿದುಬಂದಿದೆ. ಚಪ್ಪಲಿ ಎಸೆದಿರುವ ಪವಾಸ್‌ನನ್ನು ತಕ್ಷಣಕ್ಕೆ ವಶಕ್ಕೆ ತೆಗೆದುಕೊಂಡಿರುವ ಪೊಲೀಸರು ಆತನನ್ನು ವಿಚಾರಣೆಗೆ ಕರೆದೊಯ್ದಿದ್ದಾರೆ.

ಇತ್ತೀಚೆಗೆ ಗೃಹ ಸಚಿವ ಪಿ.ಚಿದಂಬರಂ ಅವರ ಪತ್ರಿಕಾ ಗೋಷ್ಠಿಯಲ್ಲಿ ಪತ್ರಕರ್ತನೊಬ್ಬ ಅವರತ್ತ ಶೂ ಎಸೆದಿದ್ದ. ಆ ಬಳಿಕ ಕುರುಕ್ಷೇತ್ರ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ನವೀನ್ ಜಿಂದಾಲ್ ಅವರತ್ತ ನಿವೃತ್ತ ಮುಖ್ಯಾಧ್ಯಾಪಕರೊಬ್ಬರು ಚಪ್ಪಲಿ ಎಸೆದಿದ್ದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ವರುಣ್ ಗಾಂಧಿಗೆ 2 ವಾರಗಳ ಪೆರೋಲ್
ಉಗ್ರ ಕಸಬ್ ಕೊಲೆಗೆ ವಿದೇಶದಲ್ಲಿ ಸಂಚು: ವರದಿ
ಜಾರ್ಖಂಡ್: ಮತ್ತೆ ನಕ್ಸಲ್ ದಾಳಿ, 7 ಸಾವು
ಬಿಗಿಭದ್ರತೆಯಲ್ಲಿ ಮೊದಲ ಹಂತದ ಮತದಾನ ಆರಂಭ
ಪೃಥ್ವಿ-2 ಕ್ಷಿಪಣಿಯ ಯಶಸ್ವಿ ಪ್ರಯೋಗ
ದೇಶಕ್ಕೆ ಅಡ್ವಾಣಿಯಂತಹ ನಾಯಕರು ಅಗತ್ಯ: ಅಟಲ್