ಆಸ್ಟ್ರೇಲಿಯಾದಲ್ಲಿ ಭಾರತೀಯ ವಿದ್ಯಾರ್ಥಿಗಳ ಮೇಲೆ ನಡೆಯುತ್ತಿರುವ ಸರಣಿ ಹಲ್ಲೆಯನ್ನು ತೀವ್ರವಾಗಿ ಖಂಡಿಸಿರುವ ಬಿಜೆಪಿ, ಪರಿಣಾಮಕಾರಿ ಕ್ರಮಕ್ಕಾಗಿ ಒತ್ತಾಯಿಸಿದ್ದು, ಈ ಅಪರಾಧದಲ್ಲಿ ಪಾಲ್ಗೊಂಡವರ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದೆ.
ಆಸ್ಟ್ರೇಲಿಯಾದಲ್ಲಿ ಭಾರತೀಯರ ಮೇಲೆ ನಡೆಯುತ್ತಿರುವ ಜನಾಂಗೀಯ ದಾಳಿಯಿಂದ ತಾನು ಚಿಂತಾಕ್ರಾಂತನಾಗಿರುವುದಾಗಿ ಬಿಜೆಪಿ ನಾಯಕ ಎಲ್.ಕೆ. ಆಡ್ವಾಣಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
"ಜನಾಂಗೀಯತೆಯು ಮಾವೀಯತೆಯ ಕಳಂಕ. ಹಿಂದೆ ಇದು ವಸಾಹತುಕರಣದ ಅಸ್ತ್ರವಾಗಿತ್ತು. ಇದು ಆಸ್ಟ್ರೇಲಿಯಾದಲ್ಲಿ ಇನ್ನೂ ಜೀವಂತವಿರುವುದು ದುರದೃಷ್ಟಕರ" ಎಂದಿರುವ ಅವರು ಆಸ್ಟ್ರೇಲಿಯಾದಲ್ಲಿರುವ ಸುಮಾರು 95,000 ವಿದ್ಯಾರ್ಥಿಗಳು ಹಾಗೂ ಅಲ್ಲಿ ವಾಸಿಸುತ್ತಿರುವ ಅಪಾರ ಸಂಖ್ಯೆಯ ಭಾರತೀಯರ ಸುರಕ್ಷೆಗಾಗಿ ಆಸ್ಟ್ರೇಲಿಯಾ ಪ್ರಾಧಿಕಾರವು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. |