ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಜಗನ್‌ಗೆ ಸಿಎಂ ಪಟ್ಟ ಕೊಡಿ, ಇಲ್ಲವಾದರೆ ಹಾರಿ ಆತ್ಮಹತ್ಯೆ ಮಾಡಿಕೊಳ್ತೇನೆ (YS Rajashekar Reddy | Fan | Suicide)
 
ಹೆಲಿಕಾಫ್ಟರ್ ಅಪಘಾತದಲ್ಲಿ ಸಾವನ್ನಪ್ಪಿರುವ ಆಂಧ್ರಪ್ರದೇಶದ ಮುಖ್ಯಮಂತ್ರಿ ರಾಜಶೇಖರ ರೆಡ್ಡಿ ಅವರ ಮುಖ್ಯಮಂತ್ರಿ ಸ್ಥಾನಕ್ಕೆ ಅವರ ಪುತ್ರನನ್ನು ನೇಮಿಸಬೇಕು ಎಂದು ಒತ್ತಾಯಿಸಿ ಅಭಿಮಾನಿಯೊಬ್ಬ ಆತ್ಮಹತ್ಯೆ ಬೆದರಿಕೆ ಹಾಕಿ ತನ್ನ ಅಭಿಮಾನದ ಪರಾಕಾಷ್ಠೆ ಮೆರೆದಿದ್ದಾನೆ.

ಹೈದರಾಬಾದಿನ ಲಾಲ್ ಬಹಾದ್ದೂರ್ ಕ್ರೀಡಾಂಗಣದಲ್ಲಿ ಲಕ್ಷಾಂತರ ಮಂದಿ ತಂಡೋಪತಂಡವಾಗಿ ಬಂದು ಅಗಲಿದ ನಾಯಕನಿಗೆ ಗೌರವ ನಮನ ಸಲ್ಲಿಸುತ್ತಿದ್ದರೆ, ಅಭಿಮಾನಿಯೊಬ್ಬ ರೆಡ್ಡಿಯವರ ಹುಟ್ಟೂರಾದ ಪುಲಿವೆಂದುಲದಲ್ಲಿ ಎತ್ತರದ ಜಾಹೀರಾತು ಫಲಕ ಏರಿದ್ದು ಅಲ್ಲಿಂದ ತನ್ನ ಬೇಡಿಕೆ ಸಲ್ಲಿಸಿದ್ದಾನೆ.

ಜಗನ್ ಮೋಹನ್ ರೆಡ್ಡಿ ಅವರನ್ನೇ ಮುಂದಿನ ಮುಖ್ಯಮಂತ್ರಿಯಾಗಿಸಬೇಕು. ಇದನ್ನು ನಡೆಸುವ ಕುರಿತು ಸೂಕ್ತ ಭರವಸೆ ನೀಡಿದಲ್ಲಿ ಮಾತ್ರ ತಾನು ಕೆಳಗಿಳಿಯುತ್ತೇನೆ ಇಲ್ಲವಾದರೆ ಇಲ್ಲಿಂದ ಹಾರಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂಬ ಬೆದರಿಕೆ ಒಡ್ಡಿದ್ದು ಭದ್ರತಾ ಅಧಿಕಾರಿಗಳಿಗೆ ತಲೆನೋವಾಗಿದ್ದಾನೆ. ಆತನ ಮನ ಒಲಿಸುವ ಪ್ರಯತ್ನ ಮುಂದುವರಿದಿದೆ.
• Play Free Online Games Click Here
• Blogs, Videos and More Click Here
• Send Musical and Animated Cards Click Here
• Simple,Fast & Free Email Service Click Here
ಸಂಬಂಧಿತ ಮಾಹಿತಿ ಹುಡುಕಿ