ಮಕರ ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ಪುಣ್ಯಸ್ಥಾನಕ್ಕಾಗಿ ಗಂಗಾಸಾಗರದಲ್ಲಿ ಇಳಿಯಲು ಪ್ರಯತ್ನಿಸಿದಾಗ ನೂಕುನುಗ್ಗಲು ಉಂಟಾಗಿ 7 ಮಂದಿ ಸಾವನ್ನಪ್ಪಿದ್ದು,10 ಮಂದಿ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇಂದು ಬೆಳಿಗ್ಗೆ ಗಂಗಾಸಾಗರಕ್ಕೆ ತೆರಳಲು ಹೆಚ್ಚಿನ ಸಂಖ್ಯೆಯಲ್ಲಿದ್ದ ಭಕ್ತರು ದೋಣಿಯನ್ನು ಹತ್ತುವಾಗ, ಪರಸ್ಪರರನ್ನು ತಳ್ಳಿದಾಗ ನೂಕು ನುಗ್ಗಲು ಉಂಟಾಗಿ ಈ ದುರ್ಘಟನೆ ಸಂಭವಿಸಿತು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಅಡೆತಡೆಗಳನ್ನು ಮುರಿದು ಭಕ್ತರು ವೇಗವಾಗಿ ಗಂಗಾಸಾಗರದತ್ತ ಸಾಗಲು ಯತ್ನಿಸಿದಾಗ ಕಾಲ್ತುಳಿತ ಉಂಟಾಯಿತು. ಪೊಲೀಸರ ಮನವಿಗೆ ಕಿವಿಗೊಡದಿರುವುದು ಸಾವಿನ ಸಂಖ್ಯೆಯಲ್ಲಿ ಹೆಚ್ಚಳವಾಗಲು ಕಾರಣವಾಯಿತು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಏತನ್ಮಧ್ಯೆ, ಮೃತರ ಸಂಖ್ಯೆಯಲ್ಲಿ ಹೆಚ್ಚಳವಾಗುವ ಸಾಧ್ಯತೆಗಳಿವೆ ಎನ್ನುವ ಆತಂಕವನ್ನು ಪೊಲೀಸ್ ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ.