ಭಗವಾನ್ ಶ್ರೀ ಸತ್ಯ ಸಾಯಿಬಾಬಾ ಅವರ ಪಾರ್ಥಿವ ಶರೀರವನ್ನು ಸಾಯಿ ಕುಲವಂತ್ ಹಾಲ್ನಲ್ಲಿಡಲಾಗಿದ್ದು, ಇಂದು ಸಂಜೆಯಿಂದ ಮಂಗಳವಾರ ಮತ್ತು ಬುಧವಾರದವರೆಗೆ ಭಕ್ತರಿಗೆ ದರಶನದ ಅವಕಾಶ ನೀಡಲಾಗುವುದು ಎಂದು ಮೂಲಗಳು ತಿಳಿಸಿವೆ.
ಜಿಲ್ಲಾಧಿಕಾರಿ ಬಿ.ಜನಾರ್ಧನ್ ರೆಡ್ಡಿ ಮಾತನಾಡಿ, ಇಂದು ಸಂಜೆ 6 ಗಂಟೆಯಿಂದ ಬಾಬಾ ಪಾರ್ಥಿವ ಶರೀರದ ದರ್ಶನಕ್ಕಾಗಿ ವ್ಯವಸ್ಥೆಗಳನ್ನು ಮಾಡಲಾಗಿದ್ದು, ಜನಜಂಗುಳಿಯನ್ನು ನಿಯಂತ್ರಿಸಲು ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ದೇಶ ವಿದೇಶಗಳಲ್ಲಿ ಲಕ್ಷಾಂತರ ಭಕ್ತರನ್ನು ಹೊಂದಿರುವ ಶ್ರೀ ಸತ್ಯ ಸಾಯಿಬಾಬಾ, ಸಾಯಿಬಾಬಾ ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ 7.40 ನಿಮಿಷಕ್ಕೆ ಇಹಲೋಕವನ್ನು ತ್ಯಜಿಸಿದ್ದಾರೆ.