ರಾಷ್ಟ್ರೀಯ | ಅಂತಾರಾಷ್ಟ್ರೀಯ | ಕರ್ನಾಟಕ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಸೋನಿಯಾ ಅಳಿಯನ ಭ್ರಷ್ಟಾಚಾರ ಶೀಘ್ರ ಬಹಿರಂಗ: ಸ್ವಾಮಿ (Subramanian Swamy | Robert Vadra | Sonia Gandhi | A Raja | Kanimozhi | CBI | P Chidambaram)
PTI
ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷೆ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾ ನಡೆಸಿರುವ ಭ್ರಷ್ಟಾಚಾರದ ಬಗ್ಗೆ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸುತ್ತಿರುವುದಾಗಿ ಜನತಾ ಪಕ್ಷದ ಅಧ್ಯಕ್ಷ ಸುಬ್ರಹ್ಮಣ್ಯಂ ಸ್ವಾಮಿ ಹೇಳಿದ್ದಾರೆ.

ಭ್ರಷ್ಟಾಚಾರದ ಹಗರಣಗಳಲ್ಲಿ ರಾಬರ್ಟ್ ಭಾಗಿಯಾಗಿರುವ ಬಗ್ಗೆ ಕೆಲ ಮಾಹಿತಿಗಳು ಲಭ್ಯವಾಗಿವೆ. ಆದರೆ, ಸದ್ಯಕ್ಕೆ ಯಾವುದೇ ಮಾಹಿತಿಯನ್ನು ಬಹಿರಂಗಪಡಿಸುವುದಿಲ್ಲ ಎಂದು ಸ್ವಾಮಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

2ಜಿ ಹಗರಣದಲ್ಲಿ ಎ,ರಾಜಾ ಭಾಗಿಯಾಗಿರುವುದನ್ನು ಬಹಿರಂಗಪಡಿಸಿದ ನಂತರ ನನ್ನನ್ನು ದಲಿತ ವಿರೋಧಿ ಎಂದು ಕರೆಯಲಾಯಿತು. ಕನಿಮೋಳಿ ವಿರುದ್ಧದ ಆರೋಪಗಳನ್ನು ಬಹಿರಂಗಪಡಿಸಿದ್ದರಿಂದ ಮಹಿಳಾ ದ್ವೇಷಿ ಎಂದು ಕರೆಯಲಾಯಿತು ಇಂತಹ ಆರೋಪಗಳು ಸತ್ಯಕ್ಕೆ ದೂರವಾಗಿವೆ. ಭ್ರಷ್ಟಾಚಾರದ ವಿರುದ್ಧ ಹೋರಾಟ ಮುಂದವರಿಸುತ್ತೇನೆ ಎಂದು ಘೋಷಿಸಿದರು.

2ಜಿ ಹಗರಣದಲ್ಲಿ ಚಿದಂಬರಂ ಪಾತ್ರವಿರುವ ಬಗ್ಗೆ ಸ್ಪಷ್ಟತೆಯಿದ್ದರೂ ಸಿಬಿಐ ತನಿಖೆ ನಡೆಸಲು ನಿರಾಕರಿಸುತ್ತಿದೆ. ಪ್ರಕರಣದಲ್ಲಿ ಚಿದಂಬರಂ ಅವರನ್ನು ಸಹ-ಆರೋಪಿಯಾಗಿಸಿಲ್ಲ. ಪ್ರಕರಣದಲ್ಲಿ ಸಹ-ಆರೋಪಿಯಾಗಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡುವುದಾಗಿ ತಿಳಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಮೈತ್ರಿಯೊಂದಿಗೆ 50 ಕ್ಷೇತ್ರದಲ್ಲಿ ಸ್ಪರ್ಧಿಸಲು ನಿರ್ಧರಿಸಲಾಗಿದೆ. ಮೈತ್ರಿ ಕುರಿತಂತೆ ಅಂತಿಮ ನಿರ್ಧಾರವನ್ನು ಬಿಜೆಪಿ ತೆಗೆದುಕೊಳ್ಳಲಿದೆ ಎಂದು ಜನತಾಪಕ್ಷದ ಅಧ್ಯಕ್ಷ ಸುಬ್ರಹ್ಮಣ್ಯಂ ಸ್ವಾಮಿ ಹೇಳಿದ್ದಾರೆ.
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಸುಬ್ರಹ್ಮಣ್ಯಂ ಸ್ವಾಮಿ, ರಾಬರ್ಟ್ ವಾಡ್ರಾ, ಸೋನಿಯಾ ಗಾಂಧಿ, 2ಜಿ ಹಗರಣ, ಸೋನಿಯಾ ಅಳಿಯ, ಸುಪ್ರೀಂಕೋರ್ಟ್, ಜನತಾಪಕ್ಷ, ಪಿಚಿದಂಬರಂ