ಧಾರಕಾರವಾಗಿ ಸುರಿದ ಮಳೆನೀರಿನಲ್ಲಿ ಮುಳುಗಿರುವ ರಾಜಧಾನಿ ಬೆಂಗಳೂರಿನಲ್ಲಿ ಪ್ರಸ್ತುತ ಎಲ್ಲೆಡೆ ನೀರು ನಿಂತಿರುವುದರಿಂದ ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ.
ನೀರು ನಿಂತಿರುವ ತಗ್ಗು ಪ್ರದೇಶಗಳಿಗೆ ತೆರಳಿ ಜನರ ಆರೋಗ್ಯ ತಪಾಸಣೆ ನಡೆಸಿ ಅಗತ್ಯವಿರುವರಿಗೆ ಓಷಧೋಪಚಾರ ಒದಗಿಸಲು 600 ಸಿಬ್ಬಂದಿಯನ್ನು ಸರ್ಕಾರ ನೇಮಿಸಿದೆ.
ಈ ಸಿಬ್ಬಂದಿ ಮನೆಮನೆಗೆ ತೆರಳಿ ಸಾಂಕ್ರಾಮಿಕ ರೋಗಗಳ ಜಾಗೃತಿ ಮೂಡಿಸಿ ಅಗತ್ಯವಿರುವವರಿಗೆ ಚಿಕಿತ್ಸೆ ನೀಡಲಿರುವುದಾಗಿ ಆರೋಗ್ಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
ಮಳೆನೀರು ಕಾಲುವೆಗಳನ್ನು ಒತ್ತುವರಿ ಮಾಡಿರುವುದರಿಂದಲೇ ಮಳೆ ಸುರಿದಾಗ ಈ ರೀತಿ ಸಂಕಷ್ಟ ಎದುರಾಗುತ್ತಿದೆ ಎಂದ ಅವರು ಒತ್ತುವರಿ ತೆರವುಗೊಳಿಸಲು ಬಿಬಿಎಂಪಿ ಕಾರ್ಯಾಚರಣೆಗೆ ಮುಂದಾಗಲಿದೆ ಎಂದರು.
|