ಸುದ್ದಿ ಜಗತ್ತು
ವ್ಯವಹಾರ
ರಾಜ್ಯ ಸುದ್ದಿ
ರಾಷ್ಟ್ರೀಯ
ಮನರಂಜನೆ
ಸ್ಯಾಂಡಲ್ ವುಡ್
ಬಾಲಿವುಡ್‌
ಇನ್ನಷ್ಟು ಹಾಸ್ಯ...
ಕ್ರೀಡಾ ಜಗತ್ತು
ಕ್ರಿಕೆಟ್ ಟಿಕರ್
ಕ್ರೀಡಾಸುದ್ದಿ
ಕ್ರಿಕೆಟ್‌
ಜ್ಯೋತಿಷ್ಯ
ಜ್ಯೋತಿಷ್ಯಶಾಸ್ತ್ರ
ವಾಸ್ತು
ನಿಮ್ಮ ಜಾತಕ
ಫೋಟೋ ಗ್ಯಾಲರಿ
ಹಾಟ್‌ಶಾಟ್
ಸಿನಿಮಾ
ಬಾಲಿವುಡ್
ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
 
ಗಡುವಿನ ಗೊಡವೆ ಬೇಕಿಲ್ಲ: ಮುಖ್ಯಮಂತ್ರಿ
NRB
ಅಧಿಕಾರ ಹಸ್ತಾಂತರಕ್ಕೆ ಸಂಬಂಧಿಸಿ ಅಂತಿಮ ಗಡುವು ವಿಧಿಸಲಾಗದು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.

ಮಧ್ಯರಾತ್ರಿಯವರೆಗೂ ನಡೆದ ಜೆಡಿಎಸ್ ಶಾಸಕಾಂಗ ಪಕ್ಷ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ನೇತೃತ್ವದ ಬಿಜೆಪಿ ಸಚಿವರ ಕ್ರಮವನ್ನು ಟೀಕಿಸಿದರು.

ಬಿಜೆಪಿ ದುಡುಕಿನ ಹೆಜ್ಜೆಯಟ್ಟಿದೆ. ಈ ರೀತಿಯ ದುಡುಕಿನ ಹೆಜ್ಜೆಗೆ ಅದು ಬೆಲೆ ತೆರಬೇಕಾಗುತ್ತದೆ ಎಂದಿದ್ದಾರೆ. ಈ ಮೊದಲು, ಒಪ್ಪಂದದ ಪ್ರಕಾರ ಮಂಗಳವಾರ ಸಂಜೆಯೊಳಗೆ ರಾಜೀನಾಮೆ ಸಲ್ಲಿಸುವಂತೆ ಹಾಗೂ ಈ ಮೂಲಕ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಲು ಅವಕಾಶ ನೀಡುವಂತೆ ಕುಮಾರಸ್ವಾಮಿಗೆ ಗಡುವು ವಿಧಿಸಿತ್ತು.

ಬಿಜೆಪಿಗೆ ಅಧಿಕಾರ ಹಸ್ತಾಂತರಿಸುವ ಸಂಬಂಧ ದೆಹಲಿಯಲ್ಲಿ ಅಗಸ್ಟ್ 5ರಂದು ನಡೆಯುವ ಪಕ್ಷಗಳ ರಾಜಕೀಯ ವ್ಯವಹಾರಗಳ ಸಮಿತಿ ಸಭೆಯು ಕೈಗೊಳ್ಳುವ ತೀರ್ಮಾನಕ್ಕೆ ಬದ್ಧವಾಗಿರಲು ಜೆಡಿಎಸ್ ಶಾಸಕಾಂಗ ಪಕ್ಷ ಸಭೆ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಹೇಳಿದರು.

ಮೈತ್ರಿ ಧರ್ಮ ಪಾಲಿಸಲು ಬಿಜೆಪಿ ಪತ್ರ: ಈ ನಡುವೆ, ನಡೆದ ಒಪ್ಪಂದದಂತೆ ಮೈತ್ರಿ ಧರ್ಮ ಪಾಲಿಸಿ ಬಿಜೆಪಿಗೆ ಅಧಿಕಾರ ಹಸ್ತಾಂತರಿಸಿ ಎಂಬ ಮನವಿಯ ಪತ್ರವನ್ನು ಬಿಜೆಪಿ ಅಧ್ಯಕ್ಷ ಡಿ.ವಿ.ಸದಾನಂದ ಗೌಡ ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ರವಾನಿಸಿದ್ದಾರೆ.

ಆರಂಭದಲ್ಲಿ ಮಾಡಿಕೊಂಡ ಒಪ್ಪಂದದಂತೆ 2006ರ ಫೆ.3 ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದಿರಿ. ತಮ್ಮ ಅವಧಿ ಇಂದಿಗೆ ಪೂರ್ಣಗೊಂಡಿದೆ. ರಾಜ್ಯಪಾಲರಿಗೆ ತ್ಯಾಗಪತ್ರ ನೀಡಿ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಲು ಅನುವು ಮಾಡಿಕೊಡಬೇಕು ಎಂದು ಸಲಹೆ ಮಾಡಿದ್ದಾರೆ.
ಮತ್ತಷ್ಟು
ಕುಮಾರಸ್ವಾಮಿ ಇಂದೂ ರಾಜೀನಾಮೆ ಇಲ್ಲ
ಜೆಡಿಎಸ್‌ಗೆ ಕಾಂಗ್ರೆಸ್ ಬಾಹ್ಯ ಬೆಂಬಲ?
ಬೆಂಗಳೂರಿನ ಯೋಧನ ಆತ್ಮಹತ್ಯೆ
ಕರುಣಾನಿಧಿ ವಿರುದ್ಧ ರಾಜ್ಯದಲ್ಲೂ ಕೇಸು ದಾಖಲು
ಬಳ್ಳಾರಿ ನೆಪ: ಬಿಗಡಾಯಿಸಿದ ಪರಿಸ್ಥಿತಿ
ಅಧಿಕಾರ ಹಸ್ತಾಂತರ ಅವಾಂತರ
ಮುಖಪುಟ  | ನಮ್ಮ ಕುರಿತು  | ಸಲಹೆಗಳು  | ಜಾಹೀರಾತು ನೀಡಲು  | ಮಿತ್ರನಿಗೆ ಕಳಿಸು  | ಹಕ್ಕು ನಿರಾಕರಣೆ
Copyright © 2009 Webdunia.com