ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಚುನಾವಣೆ ವಿಳಂಬಕ್ಕೆ ನೆಪ: ಬಿಜೆಪಿ ವಿರೋಧ
ಕರ್ನಾಟಕದ ಚುನಾವಣೆಯ ವಿಳಂಬಕ್ಕೆ ಯಾವುದೇ ನೆಪ ನೀಡುವುದನ್ನು ಬಿಜೆಪಿ ವಿರೋಧಿಸಿದ್ದು, ಮೇನಲ್ಲಿ ರಾಷ್ಟ್ರಪತಿ ಆಳ್ವಿಕೆ ಮುಕ್ತಾಯವಾಗುವುದಕ್ಕೆ ಮುಂಚೆ ಚುನಾವಣೆ ನಡೆಸುವಂತೆ ಚುನಾವಣೆ ಆಯೋಗವನ್ನು ಕೋರಿದೆ.

ಹಿರಿಯ ನಾಯಕ ಅರುಣ್ ಜೇಟ್ಲಿ ನೇತೃತ್ವದಲ್ಲಿ ಮುಖ್ಯ ಚುನಾವಣೆ ಆಯುಕ್ತ ಎನ್. ಗೋಪಾಲಸ್ವಾಮಿ ಅವರನ್ನು ಭೇಟಿ ಮಾಡಿದ ಬಿಜೆಪಿ ನಿಯೋಗ ಕರ್ನಾಟಕದಲ್ಲಿ ಚುನಾವಣೆ ವಿಳಂಬಕ್ಕೆ ಯಾವುದೇ ಕಾರಣವಿಲ್ಲ ಎಂದು ತಿಳಿಸಿದ್ದಾರೆಂದು ಪಕ್ಷದ ವಕ್ತಾರ ರವಿಶಂಕರ್ ಪ್ರಸಾದ್ ವರದಿಗಾರರಿಗೆ ತಿಳಿಸಿದರು.

ಬಿಜೆಪಿಯ ರಾಷ್ಟ್ರೀಯ ಮಂಡಳಿ ಸಭೆಯಲ್ಲಿ ಅನುಮೋದನೆಯಾದ ನಿರ್ಣಯದಲ್ಲಿ ಕಾಂಗ್ರೆಸ್ ಚುನಾವಣೆ ಮುಂದೂಡಲು ಹೊಸ ನೆಪಗಳನ್ನು ಹುಡುಕಲು ಯತ್ನಿಸುತ್ತಿದೆ ಎಂದು ಹೇಳಿದೆ. ಜೆಡಿಎಸ್ ಪಕ್ಷವು ಯಡಿಯೂರಪ್ಪ ನೇತೃತ್ವದ ಸಮ್ಮಿಶ್ರ ಕೂಟದಿಂದ ಹಿಂದೆ ಸರಿದಿದ್ದರಿಂದ ರಾಷ್ಟ್ರಪತಿ ಆಳ್ವಿಕೆಯನ್ನು ಘೋಷಿಸಲಾಗಿತ್ತು.
ಮತ್ತಷ್ಟು
ಚುನಾವಣೆಗೆ ಸಜ್ಜಾಗಲು ವೆಂಕಯ್ಯನಾಯ್ಡು ಕರೆ
ಕಮಲದ ಮಡಿಲಿಗೆ ಇನ್ನೊಂದು ದಳ
ಪ್ರತ್ಯೇಕ ಅಪಘಾತಗಳಲ್ಲಿ 3 ಮಂದಿ ಸಾವು
ಪೇಜಾವರ ಬಗ್ಗೆ ಹೇಳಿಕೆ ನೀಡಿಲ್ಲ: ದತ್ತಾ
ಬೈಕ್ ಬಾಂಬ್ ತಯಾರಿ ನಿಪುಣರು ಈ ಶಂಕಿತ ಉಗ್ರರು
ಜಟಿಲಗೊಂಡ ಹಳ್ಳಿ ಹಕ್ಕಿಯ ಸಮಸ್ಯೆ