ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಚುನಾವಣಾಧಿಕಾರಿಯಾಗಿ ವಿದ್ಯಾಶಂಕರ್ ಅಧಿಕಾರ ಸ್ವೀಕಾರ
ಹಿರಿಯ ಐಎಎಸ್ ಅಧಿಕಾರಿ ಎಂ.ಎನ್. ವಿದ್ಯಾಶಂಕರ್ ಇಂದು (ಮಂಗಳವಾರ) ರಾಜ್ಯದ ಮುಖ್ಯ ಚುನಾವಣಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದರು.

ಮುಖ್ಯ ಚುನಾವಣಾಧಿಕಾರಿಯಾಗಿದ್ದ ರಾಮಶೇಷನ್ ಅವರು ಸ್ವಯಂ ನಿವೃತ್ತಿ ಘೋಷಿಸಿರುವುದರಿಂದ ತೆರವಾದ ಸ್ಥಾನವನ್ನು ತುಂಬಲು, ವಿದ್ಯಾಶಂಕರ್‌ರ ವರನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿಯಾಗಿ ಸರ್ಕಾರ ನೇಮಕ ಮಾಡಿದ ಹಿನ್ನೆಲೆಯಲ್ಲಿ ಇಂದು ಅಧಿಕಾರ ವಹಿಸಿಕೊಂಡರು.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿದ್ಯಾಶಂಕರ್ ಅವರು, ಈಗಾಗಲೇ ಮತದಾರರ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗಿದೆ. ಆದರೆ ಆಕಸ್ಮಿಕವಾಗಿ ಕೆಲವರ ಹೆಸರುಗಳು ಪಟ್ಟಿಯಲ್ಲಿ ಸೇರ್ಪಡೆಯಾಗದಿದ್ದರೆ ಅಂತವರ ಹೆಸರುಗಳನ್ನು ಸೇರ್ಪಡೆ ಮಾಡುವ ಸಲುವಾಗಿ ಇದೇ ಶನಿವಾರ ಹಾಗೂ ಭಾನುವಾರದಂದು ವಿಶೇಷ ಅಭಿಯಾನವನ್ನು ಹಮ್ಮಿಕೊಂಡಿರುವುದಾಗಿ ತಿಳಿಸಿದರು.

ಚುನಾವಣಾ ಸಿದ್ದತೆ ಕುರಿತು ಮಾತನಾಡಿದ ಅವರು, ರಾಜ್ಯ ಚುನಾವಣೆಗೆ ಸಂಬಂಧಿಸಿದ ಎಲ್ಲಾ ಕಾರ್ಯಗಳು ಪೂರ್ಣಗೊಂಡಿದ್ದು, ಚುನಾವಣೆ ನಡೆಸಲು ಆಯೋಗ ಸರ್ವರೀತಿಯಲ್ಲೂ ಸಿದ್ದಗೊಂಡಿದೆ. ಈಗಾಗಲೇ ಚುನಾವಣಾ ಆಯೋಗದ ವೆಬ್‌ಸೈಟ್‌ನ್ನು ಕಳೆದ ಮೂರು ದಿನಗಳಲ್ಲಿ ಸುಮಾರು 4.5ಲಕ್ಷದಷ್ಟು ಜನರು ವೀಕ್ಷಿಸಿದ್ದಾರೆ ಎಂದ ತಿಳಿಸಿದರು.
ಮತ್ತಷ್ಟು
ಕಿಲ್ಲರ್ ಕವಳ ಸಿಸಿಬಿ ಪೊಲೀಸರ ಕಸ್ಟಡಿಗೆ
ದಲಿತರ ಮತಕ್ಕಾಗಿ ಶ್ರಮಿಸುತ್ತಿರುವ ಕಾಂಗ್ರೆಸ್
ಉಗ್ರರು ಶಸ್ತ್ರಾಸ್ತ್ರ ಪಡೆಯಲು ಅಡ್ಡಿಯಾದ ಕೊಲೆ
ಎಂಪಿಗಳಿಗೆ ಬಿಜೆಪಿ ಟಿಕೆಟ್ ಇಲ್ಲ?
ರಾಮನಗರದಿಂದಲೇ ಸ್ಫರ್ಧಿಸುವೆನೆಂದ ಕುಮಾರ್
ಮಹಿಳಾ ಸಬಲೀಕರಣದಿಂದ ದೇಶದ ಅಭಿವೃದ್ದಿ