ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಕಾಯಕಯೋಗಿಗೆ ಹುಟ್ಟುಹಬ್ಬದ ಸಂಭ್ರಮ
ನಡೆದಾಡುವ ದೇವರು ಎಂದೇ ಖ್ಯಾತರಾಗಿರುವ ಸಿದ್ದಗಂಗಾಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಇಂದು (ಮಂಗಳವಾರ) 101 ನೇ ವರ್ಷಕ್ಕೆ ಕಾಲಿಟ್ಟರು.

ಸಿದ್ದಗಂಗಾ ಮಠದಲ್ಲಿ ಇಂದು ಹಬ್ಬದ ವಾತಾವರಣವೇ ಕಂಡು ಬಂದಿತ್ತು. ಶ್ರೀಗಳಿಗೆ ಶುಭಾಶಯ ಹೇಳಲು ಅಸಂಖ್ಯಾತ ಭಕ್ತರು ರಾಜ್ಯದ ವಿವಿಧ ಮೂಲೆಗಳಿಂದ ಮಠಕ್ಕೆ ಧಾವಿಸಿದ್ದರು. ಈ ಸಂದರ್ಭದಲ್ಲಿ ಶ್ರೀಗಳಿಗೆ ಶುಭ ಕೋರಿ ಅವರಿಂದ ಆಶೀರ್ವಚನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಉಪ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಜಾತಿ, ಬೇಧವಿಲ್ಲದೆ ಪ್ರತಿಯೊಬ್ಬರಿಗೂ ಶಿಕ್ಷಣ ನೀಡುವ ಮಹಾನ್ ಯೋಗಿ ಎಂದು ಬಣ್ಣಿಸಿದರು.

ಮಾಜಿ ಸಚಿವ ರಾಮಚಂದ್ರ ಗೌಡ, ಮಾಜಿ ಸಚಿವ ಎಚ್. ಎಂ. ರೇವಣ್ಣ ಸೇರಿದಂತೆ ಅನೇಕ ರಾಜಕೀಯ ನಾಯಕರು ನಾಡಿಯ ಹಿರಿಯ ಚೇತನ, ತ್ರಿವಿಧ ದಾಸೋಹಿಯಾಗಿರುವ ಶ್ರೀಗಳಿಗೆ ಪುಷ್ಪ ಅರ್ಪಿಸಿ ನಮನ ಸಲ್ಲಿಸುವ ಮೂಲಕ ಶುಭ ಹಾರೈಸಿದರು.

ಹುಟ್ಟುಹಬ್ಬದ ದಿನದಂದು ಶ್ರೀಗಳು ಶಾಂತ ಚಿತ್ತದಿಂದ ಭಕ್ತಾದಿಗಳ ಹಾರೈಕೆಯನ್ನು ಪ್ರೀತಿಯಿಂದಲೇ ಸ್ವೀಕರಿಸಿದರು. ಇದೇ ಸಂದರ್ಭದಲ್ಲಿ ಸರ್ಕಾರದ ವತಿಯಿಂದ ಮುಖ್ಯ ಕಾರ್ಯದರ್ಶಿಗಳು ಕ್ಷೇತ್ರಕ್ಕೆ ಆಗಮಿಸಿ ಸ್ವಾಮೀಜಿಗಳ ಆಶೀರ್ವಾದ ಪಡೆದರು. ಮಠದ ಹಳೆಯ ವಿದ್ಯಾರ್ಥಿ ಎ.ಎಸ್ ಪಾಟೀಲ್ 54 ಲಕ್ಷ ರೂ. ಗಳ ಕಾರನ್ನು ಸ್ವಾಮೀಜಿಗಳಿಗೆ ನೀಡಿದ್ದು ವಿಶೇಷವಾಗಿತ್ತು.

ಈ ಸಂದರ್ಭದಲ್ಲಿಯೇ ಶ್ರೀಗಳ ಕುರಿತಾದ ಜೀವನ ದರ್ಶನ ಸಿಡಿಯನ್ನು ಬಿಡುಗಡೆ ಮಾಡಲಾಯಿತು.
ಮತ್ತಷ್ಟು
ಚುನಾವಣಾಧಿಕಾರಿಯಾಗಿ ವಿದ್ಯಾಶಂಕರ್ ಅಧಿಕಾರ ಸ್ವೀಕಾರ
ಕಿಲ್ಲರ್ ಕವಳ ಸಿಸಿಬಿ ಪೊಲೀಸರ ಕಸ್ಟಡಿಗೆ
ದಲಿತರ ಮತಕ್ಕಾಗಿ ಶ್ರಮಿಸುತ್ತಿರುವ ಕಾಂಗ್ರೆಸ್
ಉಗ್ರರು ಶಸ್ತ್ರಾಸ್ತ್ರ ಪಡೆಯಲು ಅಡ್ಡಿಯಾದ ಕೊಲೆ
ಎಂಪಿಗಳಿಗೆ ಬಿಜೆಪಿ ಟಿಕೆಟ್ ಇಲ್ಲ?
ರಾಮನಗರದಿಂದಲೇ ಸ್ಫರ್ಧಿಸುವೆನೆಂದ ಕುಮಾರ್