ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಎಪ್ರಿಲ್ 10ರಂದು ಕರ್ನಾಟಕ ಬಂದ್‌ಗೆ ಕರೆ
ಹೊಗೇನಕಲ್ ಜಲ ಯೋಜನೆ ಕುರಿತಂತೆ ತಮಿಳುನಾಡು ಮುಖ್ಯಮಂತ್ರಿ ಎಂ. ಕರುಣಾನಿಧಿ ಅವರ ಹೇಳಿಕೆ ವಿರುದ್ಧ ಎ.10ರಂದು ಕರ್ನಾಟಕ ಬಂದ್‌ಗೆ ಕನ್ನಡ ಪರ ಸಂಘಟನೆಗಳು ಮಂಗಳವಾರ ಕರೆ ನೀಡಿವೆ. ಹೊಗೇನಕಲ್ ಯೋಜನೆಯನ್ನು ಮುಂದುವರಿಸುವುದಾಗಿ ಎಂ.ಕರುಣಾನಿಧಿ ನೀಡಿದ ಹೇಳಿಕೆಯಿಂದ ವಿವಾದದ ಕಿಡಿ ಸ್ಫೋಟಿಸಿದೆ.

ಅಖಿತ ಕರ್ನಾಟಕ ಗಡಿ ಹೋರಾಟ ಸಮಿತಿ ಒಕ್ಕೂಟದ ಅಡಿಯಲ್ಲಿ ಬರುವ ಕನ್ನಡ ಸಂಘಟನೆಗಳು ಬಂದ್‌ಗೆ ಬೆಂಬಲ ನೀಡುವಂತೆ ಎಲ್ಲ ಪಕ್ಷಗಳಿಗೆ ಮನವಿ ಸಲ್ಲಿಸಿದ್ದಾರೆಂದು ಸಮಿತಿ ಅಧ್ಯಕ್ಷ ವಾಟಾಳ್ ನಾಗರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೊಗೇನಕಲ್ ಯೋಜನೆಯ ಕಾಮಗಾರಿ ನಿಲ್ಲಿಸುವಂತೆ ತಮಿಳುನಾಡು ಸರ್ಕಾರಕ್ಕೆ ಒತ್ತಾಯಿಸಲು ಆ ದಿನದಂದು ರಾಲಿ ಆಯೋಜಿಸಲಾಗಿದೆ. ಕರ್ನಾಟಕ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ಕರ್ನಾಟಕ ರಕ್ಷಣಾ ವೇದಿಕೆ, ದಲಿತ ಸಂಘರ್ಷ ಸಮಿತಿ, ಕನ್ನಡಸೇನೆ ಮುಂತಾದ ಸಂಘಟನೆಗಳ ಪ್ರತಿನಿಧಿಗಳು ಪ್ರತಿಭಟನಾ ಕಾರ್ಯಕ್ರಮಗಳನ್ನು ರೂಪಿಸಲು ಮಂಗಳವಾರ ಕರೆದಿದ್ದ ಸಮಿತಿ ಸಭೆಯಲ್ಲಿ ಭಾಗವಹಿಸಿದ್ದರು.
ಮತ್ತಷ್ಟು
ಹೈಕಮಾಂಡ್ ಸೂಚಿದರೆ ಚುನಾವಣೆಗೆ ಸ್ಪರ್ಧೆ: ಕೃಷ್ಣ
ವಾಗ್ವಾದ : ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಘರ್ಷಣೆ
ಹೊಗೇನಕಲ್ ವಿವಾದ: ಮುಂದುವರಿದ ಪ್ರತಿಭಟನೆ
ಕಾಯಕಯೋಗಿಗೆ ಹುಟ್ಟುಹಬ್ಬದ ಸಂಭ್ರಮ
ಚುನಾವಣಾಧಿಕಾರಿಯಾಗಿ ವಿದ್ಯಾಶಂಕರ್ ಅಧಿಕಾರ ಸ್ವೀಕಾರ
ಕಿಲ್ಲರ್ ಕವಳ ಸಿಸಿಬಿ ಪೊಲೀಸರ ಕಸ್ಟಡಿಗೆ