ರಾಜಧಾನಿ ಬೆಂಗಳೂರಿನ ಚಿತ್ರಣವನ್ನು ಸಂಪೂರ್ಣವಾಗಿ ಬದಲಿಸುವ ಆಸೆ ನನಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಶಾಭಾವವನ್ನು ವ್ಯಕ್ತಪಡಿಸಿದ್ದಾರೆ. ನಗರದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಪ್ರತಿಪಕ್ಷಗಳು ಮೆಚ್ಚುವ ರೀತಿಯಲ್ಲಿ ಬೆಂಗಳೂರನ್ನು ಅಭಿವೃದ್ದಿಪಡಿಸುವ ಗುರಿ ಹೊಂದಿದ್ದೇನೆ ಎಂದರು.
ಮುಖ್ಯಮಂತ್ರಿಯಾಗಿ 35 ದಿನಗಳು ಸಂದಿವೆ. ಈ ಅವಧಿಯಲ್ಲಿ ಸ್ವಂತದ ಬಗ್ಗೆ ಯೋಚಿಸಿಲ್ಲ. ನನಗೆ ತಿಳಿಯದ ವಿಷಯವನ್ನು ಇತರರಿಂದ ತಿಳಿದುಕೊಂಡು ಬೆಂಗಳೂರು ನಗರದ ಅಭಿವೃದ್ದಿಗೆ ಮುಂದಾಗುತ್ತೇನೆ ಎಂದರು.
ಈಗ ನನ್ನನ್ನು ವಿರೋಧಿಸುವವರು ಕೂಡಾ ಮುಂದಿನ 15 ವರ್ಷಗಳಲ್ಲಿ ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಲಿ ಎನ್ನುವ ರೀತಿಯಲ್ಲಿ ಅಭಿವೃದ್ದಿ ಮಾಡಿ ತೋರಿಸುತ್ತೇನೆ ಎಂದರು. ಕಾರ್ಯಕ್ರಮದಲ್ಲಿ ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಡಿ.ಎಚ್.ಶಂಕರಮೂರ್ತಿ, ಶಾಸಕ ಡಾ.ಅಶ್ವತ್ಥ ನಾರಾಯಣ ಉಪಸ್ಥಿತರಿದ್ದರು.
|