ಮಂಗಳವಾರ ಸಂಜೆ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ, ಮಳೆಯಿಲ್ಲದೇ ಕಂಗಲಾಗಿದ್ದ ಉತ್ತರ ಕರ್ನಾಟಕ ಭಾಗದ ರೈತರ ಮುಖದಲ್ಲಿ ಮಂದಹಾಸ ಮೂಡಿಸಿದ್ದು, ಧಾರವಾಡ, ಗದಗ, ಹಾವೇರಿ, ಬೆಳಗಾವಿ ಹಾಗೂ ಹುಬ್ಬಳ್ಳಿಗಳಲ್ಲಿ ಮಳೆಯಾಗಿದ್ದು, ಸುಮಾರು ಎರಡು ಗಂಟೆ ಅವಧಿಯಲ್ಲಿ 30 ಮಿ.ಮೀ ಮಳೆಯಾಗಿದೆ.
ಹುಬ್ಬಳ್ಳಿಯಲ್ಲಿ 30 ಮಿ.ಮೀ ಹಾಗೂ ಧಾರವಾಡದಲ್ಲಿ 35 ಮಿ.ಮೀ ಮಳೆಯಾಗಿದೆ. ಮಂಗಳವಾರ ಸಂಜೆ ಆರಂಭವಾದ ಮಳೆ ಕೆಲವು ನಿಮಿಷಗಳಲ್ಲಿ ಇಡೀ ನಗರ ವರ್ಷಧಾರೆಗೆ ತೊಯ್ದು ಹೋಗಿತ್ತು.
ಚರಂಡಿಗಳಲ್ಲಿ ನೀರು ತುಂಬಿ ಹರಿದ ಪರಿಣಾಮ ವಾಹನ ಸಂಚಾರಕ್ಕೆ ತೊಂದರೆಯಾಯಿತು. ತಗ್ಗು ಪ್ರದೇಶಗಳ ಕೆಲವು ಮನೆಯೊಳಗೆ ನೀರು ನುಗ್ಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿತು. ಬಿತ್ತನೆ ಕಾರ್ಯಕ್ಕಾಗಿ ಮಳೆಯನ್ನು ಎದುರು ನೋಡುತ್ತಿದ್ದ ರೈತರಿಗೆ ಮಂಗಳವಾರ ಸುರಿದ ಮಳೆಯಿಂದಾಗಿ ಸಂತಸದ ನಿಟ್ಟುಸಿರು ಬಿಡುವಂತಾಗಿದೆ.
|