ಕನ್ನಡ ಸಾಹಿತ್ಯ ಪರಿಷತ್ನ ಕೇಂದ್ರ ಅಧ್ಯಕ್ಷ ಸ್ಥಾನಕ್ಕೆ ಸಲ್ಲಿಸಿದ್ದ ಎಲ್ಲಾ ನಾಮಪತ್ರಗಳು ಸ್ವೀಕೃತಗೊಂಡಿದೆ ಎಂದು ಕಸಾಪ ಕೇಂದ್ರ ಚುನಾವಣಾಧಿಕಾರಿ ಕೆ. ನಾಗರಾಜು ತಿಳಿಸಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ ಕೇಂದ್ರ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದವರಲ್ಲಿ ಡಾ. ನಲ್ಲೂರು ಪ್ರಸಾದ್, ಆರ್.ಕೆ., ಮಾ.ಚ. ಕೃಷ್ಣ, ಜಿ.ವಿ. ಪ್ರಭಾಕರ ರಾವ್, ಲಕ್ಷ್ಮಣ್ ರಾವ್ ಗೋಗಿ, ಡಾ| ಎಸ್. ವಿದ್ಯಾಶಂಕರ್ ಡಾ| ಸಿ.ವೀರಣ್ಣ ಪ್ರಮುಖರು. ನಾಮಪತ್ರ ಹಿಂತೆಗೆದುಕೊಳ್ಳಲು ಶನಿವಾರ ಕೊನೆಯ ದಿನವಾಗಿದೆ ಎಂದು ನಾಗರಾಜು ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದರು.
ಅಲ್ಲದೇ, ಬೆಂಗಳೂರು ನಗರ ಜಿಲ್ಲಾ ಘಟಕ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿರುವ 13 ಮಂದಿಯಲ್ಲಿ ಒಬ್ಬರ ನಾಮಪತ್ರ ತಿರಸ್ಕೃತಗೊಂಡಿದೆ. ಉಳಿದಂತೆ 12 ಮಂದಿಯ ನಾಮಪತ್ರಗಳು ಅಂಗೀಕಾರವಾಗಿದೆ ಎಂದರು.
ಈ ನಡುವೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಘಟಕ ಅಧ್ಯಕ್ಷ ಸ್ಥಾನಕ್ಕೆ ಸಲ್ಲಿಸಿದ್ದ ಐದು ನಾಮಪತ್ರಗಳು ಸ್ವೀಕೃತಗೊಂಡಿದ್ದು, ನಾಮಪತ್ರ ವಾಪಸ್ ಪಡೆಯುವ ಅವಧಿ ಮುಗಿದ ಬಳಿಕ ಅಂತಿಮ ಕಣದಲ್ಲಿರುವವರ ಹೆಸರುಗಳನ್ನು ಪ್ರಕಟಿಸಲಾಗುವುದು ಎಂದು ಅವರು ಹೇಳಿದರು.
|