ರಾಜ್ಯದಲ್ಲಿ ರಸಗೊಬ್ಬರ ಸಮಸ್ಯೆ ಮತ್ತೆ ತಲೆದೋರಿದ್ದು, ರಸಗೊಬ್ಬರ ಸಮರ್ಪಕವಾಗಿ ದೊರೆತಿಲ್ಲ ಎಂದು ಆಕ್ರೋಶಗೊಂಡಿರುವ ರೈತರು ಗುರುವಾರ ಜಿಲ್ಲೆಯ ಚಿಕ್ಕನಾಯಕನ ಹಳ್ಳಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ರಸಗೊಬ್ಬರ ಪೂರೈಕೆಯಾಗದಿರುವ ಬಗ್ಗೆ ಆಕ್ರೋಶಗೊಂಡ ಸಾವಿರಾರು ರೈತರು ಬಸ್ಗೆ ಕಲ್ಲು ತೂರಾಟ ನಡೆಸಿದ್ದಾರೆ. ಅಲ್ಲದೆ, ತಾಲೂಕಿನಲ್ಲಿ ಅಘೋಷಿತ ಬಂದ್ಗೆ ಕರೆ ನೀಡಿದ್ದು, ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿದೆ. ಈ ಘಟನೆಯಲ್ಲಿ ಮೂವರು ಪೊಲೀಸರು ಗಾಯಗೊಂಡಿದ್ದಾರೆ.
ರಸಗೊಬ್ಬರವನ್ನು ಪೂರೈಸುತ್ತಿದ್ದ ಸೇವಾ ಸಹಕಾರ ಮಳಿಗೆ ಕಳೆದ ಕೆಲವು ದಿನಗಳಿಂದ ರಸಗೊಬ್ಬರ ನೀಡುತ್ತಿದ್ದರೂ, ರಸಗೊಬ್ಬರ ದೊರೆಯದ ರೈತರು ರಸಗೊಬ್ಬರ ಪೂರೈಸುವ ಮಳಿಗೆಗೆ ದಾಳಿ ನಡೆಸಿ ರಸಗೊಬ್ಬರಗಳನ್ನು ಹೊತ್ತೊಯ್ದ ಘಟನೆ ಇದೇ ವೇಳೆ ನಡೆಯಿತು. ಜಿಲ್ಲೆಯ 6 ತಾಲೂಕುಗಳಲ್ಲಿ ರೈತರು ರಸಗೊಬ್ಬರಕ್ಕಾಗಿ ನಡೆಸಿದ ಪ್ರತಿಭಟನೆ ಇಂದು 10ನೇ ದಿನಕ್ಕೆ ಕಾಲಿಟ್ಟಿದೆ.
|