ಜಮ್ಮು ಮತ್ತು ಕಾಶ್ಮಿರದಲ್ಲಿ ಅಮರನಾಥ ಯಾತ್ರಾರ್ಥಿಗಳ ಅನುಕೂಲಕ್ಕೆಂದು ದೇವಾಲಯದ ಮಂಡಳಿಗೆ ನೀಡಲಾಗಿದ್ದ ಜಮೀನನ್ನು ಹಿಂದಕ್ಕೆ ಪಡೆದಿರುವುದನ್ನು ವಿರೋಧಿಸಿ ನಡೆದಿರುವ ಪ್ರತಿಭಟನೆಗೆ ರಾಜ್ಯ ಬಿಜೆಪಿ ಘಟಕ ಬೆಂಬಲ ಸೂಚಿಸಿದೆ.
ಈ ಸಂಬಂಧ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿ ಇದೇ ತಿಂಗಳ 11 ರಿಂದ 13ರವರೆಗೆ ರಾಜ್ಯಾದ್ಯಂತ ಜೈಲ್ ಭರೋ ಮತ್ತು ರಾಜಭವನ ಮುತ್ತಿಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ವಕ್ತಾರ ಸಿ.ಟಿ.ರವಿ ತಿಳಿಸಿದ್ದಾರೆ.
ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಶ್ಮೀರ ಸರ್ಕಾರ ಹಾಗೂ ಕೇಂದ್ರದ ಯುಪಿಎ ಸರ್ಕಾರ ಹಿಂದೂ ಭಾವನೆಯನ್ನು ಕೆರಳಿಸುವಂತಹ ನಿಲುವು ತಳೆಯುತ್ತಿವೆ ಎಂದು ಆರೋಪಿಸಿದರು.
ಹಿಂದೂ ಭಕ್ತಾದಿಗಳ ಸೌಲಭ್ಯಕ್ಕೆಂದು ಭೂಮಿ ಕೊಡುವುದೇ ಅಪರಾಧ ಎಂದು ಭಾವಿಸುವುದಾದರೆ, ಈ ನಿಲುವು ಇತರೆ ಧರ್ಮಿಯವರಿಗೂ ಅನ್ವಯ ಆಗಬೇಕೆಂದು ಅವರು ಆಗ್ರಹಿಸಿದರು.
|