ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಕೆಎಸ್ಆರ್‌‌ಟಿಸಿ-ಕಾರು ಡಿಕ್ಕಿ ಮೂವರ ಸಾವು
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಕೆಎಸ್ಆರ್‌‌ಟಿಸಿ-ಕಾರು ಡಿಕ್ಕಿ ಮೂವರ ಸಾವು
ಕೆಎಸ್ಆರ್‌‌ಟಿಸಿ ಬಸ್ ಹಾಗೂ ಕಾರೊಂದು ಶನಿವಾರ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲೆಯ ಕಿತ್ತೂರು ಬಳಿ ಶನಿವಾರ ಮಧ್ಯಾಹ್ನ ಈ ದುರ್ಘಟನೆ ಸಂಭವಿಸಿದ್ದು, ಇತರ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡಿರುವವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಘಟನೆಯಲ್ಲಿ ಮೃತಪಟ್ಟವರು ಒಂದೇ ಕುಟುಂಬದವರೆಂದು ಗುರುತಿಸಲಾಗಿದ್ದು, ಮಹಾರಾಷ್ಟ್ರದ ಈಚಲಕರಂಜದವರು ಎಂದು ತಿಳಿದು ಬಂದಿದೆ. ಇಂಡಿಕಾ ಕಾರಿನಲ್ಲಿ ಸ್ವಗ್ರಾಮಕ್ಕೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಬಸ್ ಚಾಲಕನ ಅಜಾಗರೂಕತೆಯಿಂದಲೇ ಈ ಘಟನೆ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಕೂಡಲೇ ಸ್ಥಳಕ್ಕಾಗಮಿಸಿರುವ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.
ಮತ್ತಷ್ಟು
ನಿಗದಿತ ದಿನದಂದೇ ಬಿಬಿಎಂಪಿ ಚುನಾವಣೆ: ಅಶೋಕ್
ಅಮರನಾಥ್ ವಿವಾದದ ಬೆಂಕಿಗೆ ಬಿಜೆಪಿ ತುಪ್ಪ:ದೇವೇಗೌಡ
ಶಾಸ್ತ್ರೀಯ ಸ್ಥಾನಮಾನ:ರಾಜ್ಯಾದ್ಯಂತ ಪ್ರತಿಭಟನೆ
ತಮಿಳುನಾಡಿಗೆ ನೀರು-ರೈತರಿಗೆ ಅನ್ಯಾಯ: ಉಗ್ರಪ್ಪ
ಭಯೋತ್ಪಾದನೆಗೆ ಕಾಂಗ್ರೆಸ್ ಕುಮ್ಮುಕ್ಕು:ಡಿವಿಎಸ್
ಮಾರುತಿ-ಲಾರಿ ಡಿಕ್ಕಿ: ಇಬ್ಬರು ಸಾವು