ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಬಿಬಿಎಂಪಿ ಚುನಾವಣೆ: ವಾರ್ಡ್ ವಿಂಗಡಣೆ ಅಡ್ಡಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಬಿಬಿಎಂಪಿ ಚುನಾವಣೆ: ವಾರ್ಡ್ ವಿಂಗಡಣೆ ಅಡ್ಡಿ
ವಾರ್ಡ್ ವಿಂಗಡಣೆ ಪ್ರಕ್ರಿಯೆಯಿಂದಲೇ ಬಿಬಿಎಂಪಿ ಚುನಾವಣೆ ವಿಳಂಬವಾಗುತ್ತಿದೆ ಎಂದು ನಗರಾಭಿವೃದ್ದಿ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.

ಆದಷ್ಟು ಬೇಗ ವಾರ್ಡ್‌‌ಗಳ ಪುನರ್ ವಿಂಗಡಣೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುತ್ತದೆ. ವಿಳಂಬದಿಂದಾಗಿ ಚುನಾವಣೆ ಮುಂದೂಡಬೇಕಾದ ಪರಿಸ್ಥಿತಿ ಎದುರಾದರೆ ನ್ಯಾಯಾಲಯದ ಮೊರೆ ಹೋಗಬೇಕೇ ಎನ್ನುವ ಬಗ್ಗೆ ಯೋಚಿಸಲಾಗುವುದು ಎಂದು ಅವರು ತಿಳಿಸಿದರು.

ಹೈಕೋರ್ಟ್ ನೀಡಿರುವ ಗಡುವಿನೊಳಗೆ ಚುನಾವಣೆ ನಡೆಸುವುದಕ್ಕಾಗಿ ಸರ್ಕಾರ ಎಲ್ಲಾ ರೀತಿಯ ಪ್ರಯತ್ನ ನಡೆಸುತ್ತಿದೆ. ಅದಕ್ಕಾಗಿ ತ್ವರಿತ ಗತಿಯಲ್ಲಿ ವಾರ್ಡ್ ವಿಂಗಡಣೆ ಮತ್ತು ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ನಡೆಯುತ್ತಿದೆ. ಚುನಾವಣೆಯನ್ನು ಮುಂದೂಡುವ ಹಂಬಲ ಸರ್ಕಾರಕ್ಕಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಮತ್ತಷ್ಟು
ಕಾನೂನಿನ್ವಯ ತಮಿಳುನಾಡಿಗೆ ನೀರು:ಸಿಎಂ
ವಿದ್ಯುತ್:ಸರ್ಕಾರಗಳ ನಿರ್ಲಕ್ಷ್ಯ ಕಾರಣ-ಸಿಎಂ
ರಾಜ್ಯದಲ್ಲಿ 1 ಲಕ್ಷ ಟನ್ ರಸಗೊಬ್ಬರ ಅಭಾವ: ರವೀಂದ್ರನಾಥ್
ಹುಸಿ ಬಾಂಬ್ ಭೀತಿ ಹುಟ್ಟಿಸಿದರೆ ಹುಷಾರ್ !
ಕೆಎಸ್ಆರ್‌‌ಟಿಸಿ-ಕಾರು ಡಿಕ್ಕಿ ಮೂವರ ಸಾವು
ನಿಗದಿತ ದಿನದಂದೇ ಬಿಬಿಎಂಪಿ ಚುನಾವಣೆ: ಅಶೋಕ್