ರಾಜ್ಯದಲ್ಲಿ ಅಧಿಕಾರ ಪಡೆಯುವ ಮೂಲಕ ಬಿಜೆಪಿ ಲೂಟಿ ಮಾಡಿದ ಹಣವನ್ನು ಚುನಾವಣೆಗೆ ಬಳಸುತ್ತಿದೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಕಟುವಾಗಿ ಆರೋಪಿಸಿದ್ದಾರೆ.
ತುರುವೆಕೆರೆಯಲ್ಲಿ ಬುಧವಾರ ಆಯೋಜಿಸಿದ್ದ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯದ ಬೊಕ್ಕಸವನ್ನು ಖಾಲಿ ಮಾಡುವ ಮೂಲಕ ಬಿಜೆಪಿ ಪ್ರಜಾಪ್ರಭುತ್ವಕ್ಕೆ ಅಪವಾದವೆಸಗಿದೆ ಎಂದು ದೂರಿದರು.
ಇದೇ ವೇಳೆ ತುರುವೆಕೆರೆ ಕ್ಷೇತ್ರದಿಂದ ಜೆಡಿಎಸ್ನಿಂದ ಕಣಕ್ಕಿಳಿಯುವ ಅಭ್ಯರ್ಥಿಯನ್ನು ಘೋಷಣೆ ಮಾಡಿದ ಅವರು, ತುರುವೇಕೆರೆಯಲ್ಲಿ ನಡೆಯಲಿರುವ ವಿಧಾನಸಭಾ ಉಪಚುನಾವಣೆಗೆ ಜೆಡಿಎಸ್ನಿಂದ ಎಂ.ಟಿ. ಕೃಷ್ಣಪ್ಪ ಸ್ಪರ್ಧಿಸಲಿದ್ದಾರೆ ಎಂದು ತಿಳಿಸಿದರು.
ಈ ಕ್ಷೇತ್ರದಲ್ಲಿ ಜೆಡಿಎಸ್ ಸಾರ್ವಭೌಮತ್ವ ಪಡೆಯುವ ನಿಟ್ಟಿನಲ್ಲಿ ಎಲ್ಲಾ ಕಾರ್ಯಕರ್ತರು ಒಟ್ಟಾಗಿ ದುಡಿಯಬೇಕೆಂದು ಅವರು ಕಾರ್ಯಕರ್ತರಿಗೆ ಕರೆ ನೀಡಿದರು.
|