ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಉಪಚುನಾವಣೆ-ಸರ್ಕಾರ ಹಣ ಬಿಡುಗಡೆಗೆ ಜೆಡಿಎಸ್ ಆಕ್ಷೇಪ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಉಪಚುನಾವಣೆ-ಸರ್ಕಾರ ಹಣ ಬಿಡುಗಡೆಗೆ ಜೆಡಿಎಸ್ ಆಕ್ಷೇಪ
ವಿಧಾನಸಭಾ ಉಪಚುನಾವಣೆಯನ್ನು ಗುರಿಯಾಗಿಸಿಕೊಂಡು ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಸಂವಿಧಾನ ಬಾಹಿರವಾಗಿ ಹಣ ಬಿಡುಗಡೆ ಮಾಡಿರುವ ವಿರುದ್ಧ ಜೆಡಿಎಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಈ ಬಗ್ಗೆ ಸೋಮವಾರ ನಗರದಲ್ಲಿ ಪ್ರತಿಕ್ರಿಯಿಸಿರುವ ಜೆಡಿಎಸ್ ನಾಯಕ ಎಚ್.ಡಿ. ರೇವಣ್ಣ, ಕಾಂಗ್ರೆಸ್ ಮತ್ತು ಜೆಡಿಎಸ್ ತೊರೆದು ತಮ್ಮ ಪಕ್ಷಕ್ಕೆ ಸೇರಿರುವ ಶಾಸಕರನ್ನು ಚುನಾ ವಣೆಯಲ್ಲಿ ಗೆಲ್ಲಿಸುವ ನಿಟ್ಟಿನಲ್ಲಿ ಸರ್ಕಾರ ಈ ಕ್ರಮವನ್ನು ಕೈಗೊಂಡಿದೆ. ಇದರ ವಿರುದ್ಧ ಜೆಡಿಎಸ್ ಕಾನೂನು ಸಮರ ಹೂಡುವುದಾಗಿ ತಿಳಿಸಿದ್ದಾರೆ.

ಸಂವಿಧಾನ ಬಾಹಿರವಾಗಿ ಜೆಡಿಎಸ್ ನೂರಾರು ಕೋಟಿ ರೂ. ಹಣ ಮಂಜೂರು ಮಾಡಲಾಗಿದ್ದು, ಇದರ ವಿರುದ್ಧ ಹೋರಾಟ ನಡೆಸುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ.

ಈ ಕ್ರಮವನ್ನು ಕೈಗೊಳ್ಳುವ ಮೂಲಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದರು.

ಪ್ರಯಾಣ ದರ ಹೆಚ್ಚಳ-ಪ್ರತಿಭಟನೆ:

ಈ ನಡುವೆ ಬಸ್ ಪ್ರಯಾಣ ದರ ಏರಿಸಿರುವುದನ್ನು ಖಂಡಿಸಿ ಸೋಮವಾರ ನಗರದಲ್ಲಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.ಏಕಾಏಕಿ ಏರಿಸಲಾಗಿರುವ ಬಸ್ ಪ್ರಯಾಣದರವನ್ನು ಕೂಡಲೇ ಕಡಿತಗೊಳಿಸಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.
ಮತ್ತಷ್ಟು
ಆಪರೇಶನ್ ಹಸ್ತ: ಮೊಯ್ಲಿಗೆ ಸದಾನಂದ ಗೌಡ ಸವಾಲ್
ಬಿಹಾರ ಪ್ರವಾಹ-ರಾಜ್ಯದಿಂದ 10 ಕೋಟಿ ನೆರವು
ಅಕ್ಕ ಸಮ್ಮೇಳನ: ರಾಜ್ಯದ ಅಭಿವೃದ್ಧಿಗೆ ಸಿಎಂ ಕರೆ
'ವರ್ಷಧಾರೆ'ಗೆ 384 ಕೋಟಿ ನಷ್ಟ: ರೆಡ್ಡಿ
ಕೆಪಿಸಿಸಿ ಆಯ್ಕೆ ಹೈಕಮಾಂಡ್‌ಗೆ ಬಿಟ್ಟ ವಿಚಾರ: ಖರ್ಗೆ
ಮುಂದುವರಿದ ವರುಣನ ಆರ್ಭಟಕ್ಕೆ 4 ಬಲಿ