ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ನೀಡಿರುವ ಕೇಂದ್ರ ನಿರ್ಧಾರವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ವಾಗತಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಮುಖ್ಯಮಂತ್ರಿಗಳು, ಕರ್ನಾಟಕದ 5 ಕೋಟಿ ಕನ್ನಡಿಗರಿಗೆ ಸಂದ ಜಯವಾಗಿದೆ ಎಂದು ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ನವೆಂಬರ್ 5ರಂದು ದೆಹಲಿಗೆ ತೆರಳಿರುವ ಸರ್ವಪಕ್ಷ ನಿಯೋಗವನ್ನು ರದ್ದು ಪಡಿಸುವುದಾಗಿ ಅವರು ತಿಳಿಸಿದ್ದಾರೆ.
ಹಲವು ದಶಕಗಳಿಂದ ಶಾಸ್ತ್ರೀಯ ಸ್ಥಾನಮಾನ ನೀಡುವ ನಿಟ್ಟಿನಲ್ಲಿ ಅನೇಕ ಪ್ರತಿಭಟನೆ, ಹೋರಾಟಗಳಿಗೆ ದೊರೆತ ಜಯ ಇದಾಗಿದೆ ಎಂದು ಅವರು ಬಣ್ಣಿಸಿದ್ದಾರೆ.
ಶಾಸ್ತ್ರೀಯ ಭಾಷೆ ಸ್ಥಾನ ದೊರೆತಿರುವ ಕುರಿತು ಪ್ರತಿಕ್ರಿಯಿಸಿರುವ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ನಲ್ಲೂರು ಪ್ರಸಾದ್, ಕನ್ನಡ ಹೋರಾಟಗಾರರಿಗೆ ದೊರೆತ ಜಯವಾಗಿದೆ ಎಂದಿದ್ದಾರೆ. |