ರಾಜ್ಯೋತ್ಸವ ಪ್ರಶಸ್ತಿಯನ್ನು ಇನ್ನೂ ಮೂವರು ಮಂದಿಗೆ ನೀಡಿದ್ದು, ಇದರೊಂದಿಗೆ ಪ್ರಶಸ್ತಿ ಪುರಸ್ಕೃತರ ಸಂಖ್ಯೆ 92ಕ್ಕೆ ಏರಿದೆ.
ವೈದ್ಯಕೀಯ ಕ್ಷೇತ್ರದಲ್ಲಿ ಡಾ.ವಿಜಯಲಕ್ಷ್ಮಿ ಬಾಳೇಕುಂದ್ರಿ, ರಂಗಭೂಮಿ-ಅಶೋಕ್ ಬಾದರದಿನ್ನಿ, ಶಿಲ್ಪಕಲೆ-ಶಂಕರಾಚಾರ್ಯ ಅವರಿಗೆ ಪ್ರಶಸ್ತಿ ಪಟ್ಟಿಯಲ್ಲಿ ಸೇರಿದ್ದಾರೆ.
ರಾಜ್ಯೋತ್ಸವ ಪ್ರಶಸ್ತಿ 20ಗ್ರಾಂ ಚಿನ್ನ ಹಾಗೂ ಒಂದು ಲಕ್ಷ ರೂಪಾಯಿ ನಗದು ಸೇರಿದೆ. ರಾಜ್ಯೋತ್ಸವ ದಿನವಾದ ಇಂದು (ನ.1) ಪ್ರಶಸ್ತಿಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿತರಿಸಲಿದ್ದಾರೆ.
ರಾಜ್ಯೋತ್ಸವ ಪ್ರಶಸ್ತಿಗಾಗಿ ಈ ಬಾರಿ 3ಸಾವಿರಕ್ಕೂ ಅಧಿಕ ಅರ್ಜಿಗಳು ಬಂದಿದ್ದು, ಆಯ್ಕೆಗಾಗಿ ಬಹಳಷ್ಟು ಕಸರತ್ತುಗಳನ್ನು ನಡೆಸಿದ ನಂತರ ಇದೀಗ ಸರ್ಕಾರ 92 ಮಂದಿಗೆ ಪ್ರಶಸ್ತಿಯನ್ನು ನೀಡಿದೆ. |