ಕನ್ನಡಕ್ಕೆ ಶಾಸ್ತ್ರೀಯ ಭಾಷೆ ಸ್ಥಾನಮಾನ ದೊರೆತಿರುವ ಹಿನ್ನೆಲೆಯಲ್ಲಿ ಶನಿವಾರ ರಾಜ್ಯಾದ್ಯಂತ 53ನೇ ಕನ್ನಡ ರಾಜ್ಯೋತ್ಸವವನ್ನು ಎಲ್ಲೆಡೆ ಅದ್ದೂರಿಯಿಂದ ಚಾಲನೆ ನೀಡಲಾಯಿತು.ನಾಡಹಬ್ಬಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಬೆಳಿಗ್ಗೆ ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಬೆಂಗಳೂರು, ಮೈಸೂರು, ಮಂಗಳೂರು, ಬೆಳಗಾವಿ, ಬಳ್ಳಾರಿ, ಮಂಡ್ಯ ಸೇರಿದಂತೆ ರಾಜ್ಯಾದ್ಯಂತ ಪಟಾಕಿಗಳನ್ನು ಸಿಡಿಸಿ, ಸಿಹಿಯನ್ನು ಹಂಚುವ ಮೂಲಕ ಈ ಬಾರಿಯ ಕನ್ನಡ ರಾಜ್ಯೋತ್ಸವನ್ನು ಸಂಭ್ರಮದಿಂದ ಆಚರಿಸುತ್ತಿದ್ದ ದೃಶ್ಯ ಎಲ್ಲೆಡೆ ಕಂಡು ಬಂದಿತ್ತು.ಉತ್ತರಕರ್ನಾಟಕ ಭಾಗದಲ್ಲಿ ಕೋಲಾಟ, ಡೊಳ್ಳು ಕುಣಿತ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ನಾಡಹಬ್ಬ ಆಚರಿಸಿದ್ದರೆ, ಉಳಿದೆಡೆ ಟ್ಯಾಬ್ಲೋ, ನೃತ್ಯಗಳ ಮುಖೇನ ಆಚರಿಸಿದರು. |
|