ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > 2ವರ್ಷಗಳಲ್ಲಿ ಹಳ್ಳಿಗಳಿಗೆ ನಿರಂತರ ವಿದ್ಯುತ್: ಈಶ್ವರಪ್ಪ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
2ವರ್ಷಗಳಲ್ಲಿ ಹಳ್ಳಿಗಳಿಗೆ ನಿರಂತರ ವಿದ್ಯುತ್: ಈಶ್ವರಪ್ಪ
ಮಾಲೂರಿನಲ್ಲಿ ಆರಂಭಿಸಿರುವ ದಿನದ 24 ಗಂಟೆಯೂ ನಿರಂತರ ವಿದ್ಯುತ್ ಯೋಜನೆಯನ್ನು ಮುಂದಿನ 2 ವರ್ಷಗಳಲ್ಲಿ ರಾಜ್ಯದ ಎಲ್ಲಾ ಹಳ್ಳಿಗಳಿಗೆ ವಿಸ್ತರಿಸಲಾಗುವುದು ಎಂದು ಇಂಧನ ಸಚಿವ ಕೆ.ಎಸ್. ಈಶ್ವರಪ್ಪ ಭರವಸೆ ನೀಡಿದ್ದಾರೆ.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಿನದ 24ಗಂಟೆಯ ನಿರಂತರ ವಿದ್ಯುತ್ ಯೋಜನೆಗಾಗಿ ಮಾಲೂರ ಹೊರತುಪಡಿಸಿ ಬೈಲಹೊಂಗಲ, ಮಳವಳ್ಳಿ, ಕೊಪ್ಪಳಗಳನ್ನು ಆಯ್ಕೆ ಮಾಡಲಾಗಿದ್ದು, ಉಪಚುನಾವಣೆ ನಂತರ ಯೋಜನೆ ಅನುಷ್ಠಾನಕ್ಕೆ ಬರಲಿದೆ ಎಂದು ತಿಳಿಸಿದರು.

ಅಲ್ಲದೆ, ಈ ಮೂಲಕ ಮುಂದಿನ 2 ವರ್ಷಗಳಲ್ಲಿ ಈ ಯೋಜನೆಯನ್ನು ರಾಜ್ಯದ ಎಲ್ಲಾ ಹಳ್ಳಿಗಳಿಗೆ ವಿಸ್ತರಿಸುವ ಉದ್ದೇಶ ಸರಕಾರ ಹೊಂದಿದೆ ಎಂದು ಅವರು ಹೇಳಿದ್ದಾರೆ.

ವಿದ್ಯಾರ್ಥಿಗಳ ಪರೀಕ್ಷಾ ಹಿನ್ನೆಲೆಯಲ್ಲಿ ಸಂಜೆ 6ರಿಂದ 10ರವರೆಗೆ ಸಿಂಗಲ್ ಫೇಸ್ ವಿದ್ಯುತ್ ಪೂರೈಕೆ ಮಾಡಲಾಗುವುದು ಎಂದು ತಿಳಿಸಿದ ಅವರು, ವಿದ್ಯುತ್ ಕ್ಷಾಮ ನಿವಾರಿಸಲು ಎಲ್ಲಾ ಪ್ರಯತ್ನ ಕೈಗೊಳ್ಳಲಾಗುವುದು ಎಂದು ವಿವರಿಸಿದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ವಿಧಾನ ಪರಿಷತ್ತಿಗೆ ಬಿಜೆಪಿ ಅಭ್ಯರ್ಥಿಗಳ ನಾಮಪತ್ರ
ಕೊಡಗಿನಲ್ಲಿ ಶಂಕಿತ 3 ಉಗ್ರರ ಬಂಧನ
ಸ್ಫೋಟ ಹಿನ್ನೆಲೆ: ಕರಾವಳಿಯಾದ್ಯಂತ ಕಟ್ಟೆಚ್ಚರ
ಚರ್ಚ್ ಸ್ಫೋಟ: ದೀನ್‌ದಾರ್‌ನ 11 ಆರೋಪಿಗಳಿಗೆ ಗಲ್ಲು
ಉಗ್ರರ ಮುಂದಿನ ಗುರಿ ಬೆಂಗಳೂರು?
ದೇಶಕ್ಕಾಗಿ ಪ್ರಾಣ ತೆತ್ತ ಮಗ: ಉನ್ನಿಕೃಷ್ಣನ್