ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ವಿಧಾನಸೌಧ ದಳ್ಳಾಳಿಗಳ ತಾಣ: ಎಸ್.ಎಂ.ಕೃಷ್ಣ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ವಿಧಾನಸೌಧ ದಳ್ಳಾಳಿಗಳ ತಾಣ: ಎಸ್.ಎಂ.ಕೃಷ್ಣ
ರಾಜ್ಯದಲ್ಲಿ ಬಿಜೆಪಿ ಆಡಳಿತದಿಂದಾಗಿ ವಿಧಾನಸೌಧ ಇದೀಗ ರಾಜಕೀಯ ದಳ್ಳಾಳಿಗಳ ತಾಣವಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ.

ನಗರದಲ್ಲಿ ಆಯೋಜಿಸಲಾಗಿದ್ದ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು, ವಿಧಾನಸೌಧ ರಾಜಕೀಯ ದಳ್ಳಾಳಿಗಳ ತಾಣವಾಗುತ್ತಿರುವುದರಿಂದ ವರ್ಗಾವಣೆಗಾಗಿ ಹೊಸ ಕಾರ್ಖಾನೆ ಸ್ಥಾಪನೆಯಾಗಿದೆ ಎಂದು ಲೇವಡಿ ಮಾಡಿದ್ದಾರೆ.

51 ವರ್ಷಗಳ ರಾಜಕೀಯ ಅನುಭವ ಹೊಂದಿದ್ದರೂ ನನ್ನ ಕ್ಷೇತ್ರವನ್ನು ಡಿ.ಸಿ. ತಮ್ಮಣ್ಣ ಅವರಿಗೆ ನೀಡಿ ತಪ್ಪು ಮಾಡಿದೆ ಎಂದು ವಿಷಾದ ವ್ಯಕ್ತಪಡಿಸಿದ ಅವರು, ಪಕ್ಷದ ನೆರಳಿನಲ್ಲಿ ಬೆಳೆದು ತಮ್ಮ ವರ್ಚಸ್ಸನ್ನು ಬೆಳೆಸಿಕೊಂಡು ತಮ್ಮಣ್ಣ ಪಕ್ಷಕ್ಕೆ ದ್ರೋಹವೆಸಗಿದ್ದಾರೆ ಎಂದು ಹೇಳಿದರು.

ನಾನೆಂದೂ ಅಧಿಕಾರಕ್ಕಾಗಿ ಆಸೆ ಪಟ್ಟವನಲ್ಲ. ಮಹಾರಾಷ್ಟ್ರ ರಾಜ್ಯಪಾಲ ಆಗುತ್ತೇನೆ ಎಂದು ಕೂಡ ತಿಳಿದಿರಲಿಲ್ಲ. ನಾನು ಹೊರ ದೇಶದಲ್ಲಿದ್ದಾಗ ರಾಜ್ಯಪಾಲನಾದೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಉಪಚುನಾವಣೆಯಲ್ಲಿ ಬಿಜೆಪಿಯನ್ನು ಕಿತ್ತೊಗೆಯಿರಿ: ಕೃಷ್ಣಭೈರೇಗೌಡ
ನೀತಿ ಸಂಹಿತೆ ನಡುವೆಯೂ ಮತ್ತೆ ಅಧಿಕಾರಿಗಳ ವರ್ಗ
ಕೇರಳ ಸಿಎಂ ವಿರುದ್ಧ ಉನ್ನಿಕೃಷ್ಣನ್ ಕೆಂಡಾಮಂಡಲ
ಮುಂಬೈ ದಾಳಿ: ಬೆಂಗಳೂರಿನಲ್ಲಿ ಅಕ್ಮಲ್ ವಿಚಾರಣೆ ?
ಏಕತೆ ಪ್ರದರ್ಶನಕ್ಕೆ ದೇವೇಗೌಡ ಕರೆ
ರಾಜ್ಯದಲ್ಲಿ ಕೃಷಿ ಉದ್ಯೋಗ ಸೃಷ್ಟಿಗೆ ರೈತ ಸಂಘ ಒತ್ತಾಯ