ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಮುಖ್ಯಮಂತ್ರಿಗಳ ಸಭೆ ನಡೆಸಲು ಸಿಎಂ ಆಗ್ರಹ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಮುಖ್ಯಮಂತ್ರಿಗಳ ಸಭೆ ನಡೆಸಲು ಸಿಎಂ ಆಗ್ರಹ
ಮುಂಬೈ ಉಗ್ರರ ದಾಳಿ ಹಿನ್ನೆಲೆಯಲ್ಲಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆಯಬೇಕೆಂದು ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಒತ್ತಾಯಿಸಿದ್ದಾರೆ.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಗ್ರರ ದಾಳಿ ಹೊಣೆಯನ್ನು ಸಾಮೂಹಿಕವಾಗಿ ಹೊರಬೇಕು. ಇದಕ್ಕಾಗಿ ಕೇಂದ್ರ ಗೃಹಮಂತ್ರಿಗಳು ರಾಜೀನಾಮೆ ನೀಡುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಶಿವರಾಜ್ ಪಾಟೀಲ್ ತಲೆದಂಡದಿಂದ ಏನೂ ಆಗುವುದಿಲ್ಲ. ಈ ಘಟನೆಗೆ ಒಬ್ಬರನ್ನು ಗುರಿಪಡಿಸುವ ಬದಲು ಸಂಘಟಿತ ಹೋರಾಟ ಅಗತ್ಯ ಎಂದು ಅವರು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಶೀಘ್ರವೇ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದು ಆಂತರಿಕ ಭದ್ರತೆ ಹಾಗೂ ಉಗ್ರರ ನಿಗ್ರಹ ವಿಚಾರದಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಚರ್ಚೆ ನಡೆಸಬೇಕೆಂದು ಅವರು ಆಗ್ರಹಿಸಿದ್ದಾರೆ.

ಮುಂಬೈನಂತಹ ಘಟನೆ ರಾಜ್ಯದಲ್ಲಿ ಮರುಕಳಿಸಲು ಅವಕಾಶ ಮಾಡಿಕೊಡುವುದಿಲ್ಲ ಎಂದು ತಿಳಿಸಿದ ಅವರು, ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ, ಭಯೋತ್ಪಾದನೆ ಹತ್ತಿಕ್ಕಲು ರಾಜ್ಯ ಸರ್ವ ರೀತಿಯಲ್ಲೂ ಸಜ್ಜಾಗಿದೆ ಎಂದು ಉತ್ತರಿಸಿದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಡಿ.5: ಸರಕಾರದ ವಿರುದ್ಧ ರೈತ ಸಂಘ ಪ್ರತಿಭಟನೆ
ಇಂದು ಸರ್ವಪಕ್ಷ ಸಭೆ
ವಿಧಾನಸೌಧ ದಳ್ಳಾಳಿಗಳ ತಾಣ: ಎಸ್.ಎಂ.ಕೃಷ್ಣ
ಉಪಚುನಾವಣೆಯಲ್ಲಿ ಬಿಜೆಪಿಯನ್ನು ಕಿತ್ತೊಗೆಯಿರಿ: ಕೃಷ್ಣಭೈರೇಗೌಡ
ನೀತಿ ಸಂಹಿತೆ ನಡುವೆಯೂ ಮತ್ತೆ ಅಧಿಕಾರಿಗಳ ವರ್ಗ
ಕೇರಳ ಸಿಎಂ ವಿರುದ್ಧ ಉನ್ನಿಕೃಷ್ಣನ್ ಕೆಂಡಾಮಂಡಲ