ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ತುಮಕೂರು ವಿವಿಗೆ ನನ್ನ ಹೆಸರು ಬೇಡ: ಶಿವಕುಮಾರಸ್ವಾಮೀಜಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ತುಮಕೂರು ವಿವಿಗೆ ನನ್ನ ಹೆಸರು ಬೇಡ: ಶಿವಕುಮಾರಸ್ವಾಮೀಜಿ
NRB
ತುಮಕೂರು ವಿಶ್ವವಿದ್ಯಾಲಯಕ್ಕೆ ತನ್ನ ಹೆಸರು ಇಡುವುದು ಬೇಡ ಎಂದು ತುಮಕೂರು ಸಿದ್ದಗಂಗಾ ಮಠದ ಶತಾಯುಷಿ ಡಾ.ಶಿವಕುಮಾರ ಸ್ವಾಮೀಜಿ ತಿಳಿಸಿದ್ದಾರೆ.

ಸೋಮವಾರ ಸಿದ್ದಗಂಗಾ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಮಕೂರು ವಿವಿಗೆ ನನ್ನ ಹೆಸರು ಇಡುವುದಕ್ಕೆ ನನಗೆ ಆಸಕ್ತಿ ಇಲ್ಲ. ಅಲ್ಲದೇ ಹೆಸರಿಡುವ ಬಗ್ಗೆ ಮುಖ್ಯಮಂತ್ರಿಗಳು ನನ್ನ ಗಮನಕ್ಕೆ ತಾರದೇ ಘೋಷಣೆ ಮಾಡಿದ್ದಾರೆ ಎಂದು ಹೇಳಿದರು. ವಿವಿಗೆ ನನ್ನ ಹೆಸರು ಇಡುವುದು ಬೇಡ ಎಂಬ ಬಗ್ಗೆ ಸರ್ಕಾರಕ್ಕೆ ಪತ್ರ ಬರೆಯುವುದಾಗಿ ತಿಳಿಸಿದರು.

ಇದಕ್ಕೂ ಮೊದಲು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಕೂಡ, ವಿವಿಗೆ ನನ್ನ ಹೆಸರಿಡುವ ಬಗ್ಗೆ ಇಚ್ಚೆ ವ್ಯಕ್ತಪಡಿಸಿದ್ದರು. ಆ ಸಂದರ್ಭದಲ್ಲೂ ಕೂಡ ನಾನು ನನ್ನ ಹೆಸರಿಡುವುದು ಬೇಡ ಎಂದು ಹೇಳಿರುವುದಾಗಿ ಸ್ಪಷ್ಟಪಡಿಸಿದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ತಮಿಳರ ಮೋಹ-ಸಿಎಂ ಕ್ಷಮೆಗೆ ಕರವೇ ಪಟ್ಟು
ಆತಂಕದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ: ನಾರಾಯಣಸ್ವಾಮಿ
ಶವ ಮಾರಾಟ-ನಾಲ್ವರು ಪೊಲೀಸ್ ಅಧಿಕಾರಿಗಳ ಅಮಾನತು
ರಾಜಾಜಿನಗರದಲ್ಲಿ ಕಚ್ಚಾ ಬಾಂಬ್ ಪತ್ತೆ
ವಿವಾದದ ಸುಳಿ: ವರುಣ್ ಬಳಿಕ ಅನಂತಕುಮಾರ್ ಹೆಗಡೆ ಸರದಿ
ಲೋಕಸಭೆ: ಅನಂತಕುಮಾರ್ ನಾಮಪತ್ರ ಸಲ್ಲಿಕೆ