ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಬಿಬಿಎಂಪಿ ವಾರ್ಡ್ ಹೆಚ್ಚಳಕ್ಕೆ ರಾಜ್ಯಪಾಲರ ಆಕ್ಷೇಪ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಬಿಬಿಎಂಪಿ ವಾರ್ಡ್ ಹೆಚ್ಚಳಕ್ಕೆ ರಾಜ್ಯಪಾಲರ ಆಕ್ಷೇಪ
ಮುಂಬರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣೆಗೆ ವಾರ್ಡ್ ಸಂಖ್ಯೆಯನ್ನು 147 ರಿಂದ 198ಕ್ಕೆ ಏರಿಸುವ ಸರ್ಕಾರದ ನಿರ್ಧಾರಕ್ಕೆ ರಾಜ್ಯಪಾಲ ರಾಮೇಶ್ವರ್ ಠಾಕೂರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗಷ್ಟೇ ಗ್ರಾಮೀಣ ಅಭಿವೃದ್ದಿ ಇಲಾಖೆಯ ಸಚಿವೆ ಶೋಭಾ ಕರಂದ್ಲಾಜೆ ಮಹಾನಗರ ಪಾಲಿಕೆಯ ವಾರ್ಡ್ ಹೆಚ್ಚಳ ಮಾಡುವುದಾಗಿ ಹೇಳಿದ್ದರು. ಆದರೆ ರಾಜ್ಯಪಾಲರಿಂದ ಈ ಆದೇಶಕ್ಕೆ ಆಕ್ಷೇಪ ವ್ಯಕ್ತವಾಗಿದೆ.

ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿ ವಾರ್ಡ್ ಸಂಖ್ಯೆಯನ್ನು ಹೆಚ್ಚಿಸಲು ನಿರ್ಧರಿಸಲಾಗಿತ್ತು. ಈ ಆದೇಶದ ಪ್ರಸ್ತಾವನೆಯನ್ನು ರಾಜ್ಯಪಾಲರಿಗೆ ಕಳುಹಿಸಿ ಕೊಡಲಾಗಿತ್ತು. ಆದರೆ ರಾಜ್ಯಪಾಲರು ವಾರ್ಡ್ ಸಂಖ್ಯೆಯನ್ನು ಹೆಚ್ಚಿಸುವ ಅವಶ್ಯವಾದರು ಏನಿತ್ತು ಎಂದು ಪ್ರಶ್ನಿಸಿ ಈ ಕುರಿತು ಸೂಕ್ತವಾಗಿ ಸ್ಪಂದಿಸಿಲ್ಲ ಎನ್ನಲಾಗಿದೆ.

ರಾಜ್ಯಪಾಲರು ವಾರ್ಡ್‌ಗಳ ಸಂಖ್ಯೆಯನ್ನು ಹೆಚ್ಚಿಸುವ ಬಗ್ಗೆ ಸ್ಪಷ್ಟನೆ ಕೇಳಿದ್ದಾರೆ. ಇದರಿಂದ ನಗರಕ್ಕೆ ಯಾವ ರೀತಿ ಪ್ರಯೋಜನವಾಗುತ್ತದೆ? ಈ ಪ್ರಕ್ರಿಯೆಗೆ ಎಷ್ಟು ಕಾಲಾವಕಾಶ ಬೇಕೆಂದು ತಿಳಿಸಬೇಕು ಎಂದಿದ್ದಾರೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಕಾಂಗ್ರೆಸ್ ಅಗತ್ಯ ನಮಗಿಲ್ಲ: ಕುಮಾರಸ್ವಾಮಿ ಕಿಡಿ
ಹೃದಯಾಘಾತದಿಂದ ಕೊಂಡಜ್ಜಿ ಸಾವು: ವೈದ್ಯರ ವರದಿ
ಮತ್ತೆ ಸಿಎಂ ಉಲ್ಟಾ: ಸಂಪುಟ ಪುನಾರಚನೆ ಇಲ್ಲ
ಎಸ್ಸೆಸ್ಸೆಲ್ಸಿ ಮರು ಮೌಲ್ಯಮಾಪನ: ಐಶ್ವರ್ಯ ಪ್ರಥಮ
ಕಾರ್ಮಿಕ ಜೀವನ...ಸಚಿವಗಿರಿಯ ಖರ್ಗೆ ಸಾಧನೆ...
ಕೋಪದಿಂದ ಸಭೆಯನ್ನೇ ರದ್ದುಗೊಳಿಸಿದ ಸಿಎಂ!