ಮಳೆಯಿಂದಾಗಿ ಮೋರಿಯಲ್ಲಿ ಕೊಚ್ಚಿ ಹೋದ ಬಾಲಕ ಅಭಿಷೇಕ್ ಶವಪತ್ತೆಗಾಗಿ ಕಳೆದ 4ದಿನಗಳಿಂದ ಶೋಧಕಾರ್ಯಾಚರಣೆ ನಡೆಸುತ್ತಿದ್ದರೂ ಕೂಡ ಈವರೆಗೂ ಪತ್ತೆಯಾಗಿಲ್ಲ.
ಅಭಿಷೇಕ್ ಮೋರಿಯಲ್ಲಿ ಬಿದ್ದ ಸ್ಥಳದಿಂದ ಮತ್ತೆ ಶೋಧ ಕಾರ್ಯಾಚರಣೆ ಆರಂಭವಾಗಿದ್ದು, ಗುರುವಾರವೂ ಕೂಡ ಕಾರ್ಯಾಚರಣೆ ಮುಂದುವರಿದಿರುವುದಾಗಿ ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ಭಾನುವಾರ ನಗರದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಲಿಂಗರಾಜಪುರದ ಬಳಿ ತಾಯಿಯ ಜತೆ ಹೊರ ಬಂದಿದ್ದ 5ರ ಪುಟ್ಟ ಬಾಲಕ ಅಭಿಷೇಕ್ ಮೋರಿ ನೀರಿನಲ್ಲಿ ಕೊಚ್ಚಿ ಹೋಗಿದ್ದು, ಆತನ ದೇಹಕ್ಕಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯರು ಈ ಕಾರ್ಯಾಚರಣೆ ಆರಂಭಿಸಿದ್ದರು.
ಅಭಿಷೇಕ್ ಶವಪತ್ತೆಗಾಗಿ ಬಿಬಿಎಂಪಿ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯರು ಶೋಧ ಕಾರ್ಯದಲ್ಲಿ ತೊಡಗಿದ್ದಾರೆ. ಸರಿಯಾದ ಸಲಕರಣೆ ಕೊರತೆ ಮತ್ತು ಬಿಬಿಎಂಪಿ ನಿರ್ಲಕ್ಷ್ಯಕ್ಕೆ ಸ್ಥಳೀಯರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. |