ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಈಶ್ವರಪ್ಪ ಸಚಿವರಾಗಿ ಮುಂದುವರಿಯಲು ಯೋಗ್ಯರಲ್ಲ: ಆರ್.ವಿ.
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಈಶ್ವರಪ್ಪ ಸಚಿವರಾಗಿ ಮುಂದುವರಿಯಲು ಯೋಗ್ಯರಲ್ಲ: ಆರ್.ವಿ.
ಬಿಜೆಪಿ ಹಣ ಹಾಗೂ ಹೆಂಡ ವಿತರಿಸಿ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದೆ ಎಂಬ ಹೇಳಿಕೆಯನ್ನು ಬದಲಿಸಿರುವ ಈಶ್ವರಪ್ಪನವರ ವಿರುದ್ಧ ಹರಿಹಾಯ್ದಿರುವ ಕೆಪಿಸಿಸಿ ಅಧ್ಯಕ್ಷ ಆರ್. ವಿ. ದೇಶಪಾಂಡೆ, ಸಚಿವರಾಗಿ ಉಳಿಯುವ ಯೋಗ್ಯತೆ ಹೊಂದಿಲ್ಲ ಎಂಬುದನ್ನು ಸಾಬೀತು ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಧ್ಯಮಗಳ ಮುಂದೆ ಹೇಳಿಕೆ ನೀಡಿ ಬಳಿಕ ಆ ರೀತಿ ಹೇಳಿಕೆ ನೀಡೇ ಇಲ್ಲ ಎನ್ನುವ ಮೂಲಕ ವಿಶ್ವಾಸಾರ್ಹತೆ ಕಳೆದುಕೊಂಡಿದ್ದಾರೆ. ಹೀಗಾಗಿ ಅವರಿಗೆ ಸಚಿವ ಸ್ಥಾನದಲ್ಲಿ ಮುಂದುವರಿಯುವ ಯೋಗ್ಯತೆ ಇಲ್ಲ ಎಂದು ದೂರಿದ್ದಾರೆ.

ಸಚಿವರ ಹೇಳಿಕೆ ಬಗ್ಗೆ ಮುಖ್ಯಮಂತ್ರಿಗಳು ಇದುವರೆಗೂ ಯಾವುದೇ ಪ್ರತಿಕ್ರಿಯೆ ನೀಡದಿರುವುದು ಗೊಂದಲಕ್ಕೆ ಕಾರಣವಾಗಿದೆ. ಇದರಿಂದ ಸಚಿವರ ಹೇಳಿಕೆ ಸುಳ್ಳೊ ಅಥವಾ ನಿಜವೋ ಎಂಬ ಗೊಂದಲ ನಿರ್ಮಾಣವಾಗಿದ್ದು, ಈ ಬಗ್ಗೆ ತನಿಖೆ ನಡೆಸುವುದೇ ಸೂಕ್ತ ಎಂದು ಅವರು ಹೇಳಿದ್ದಾರೆ.

ಮುಖ್ಯಮಂತ್ರಿಗಳು ವಿಜಯ ಸಂಕಲ್ಪ ದಿನಾಚರಣೆ ನಡೆಸಿದ ದಿನದಿಂದಲೇ ಬಿಜೆಪಿ ಸರ್ಕಾರದ ಸಂಕಷ್ಟದ ದಿನಗಳು ಪ್ರಾರಂಭವಾಗಿದೆ ಎಂಬುದಕ್ಕೆ ಇದೇ ನಿಜವಾದ ಸಾಕ್ಷಿ. ವಾಸ್ತವವಾಗಿ ವಿಜಯ ಸಂಕಲ್ಪ ಬಿಜೆಪಿ ಪಾಲಿಗೆ ಕಪ್ಪು ದಿನವಾಗಿದೆ ಎಂದು ವ್ಯಂಗ್ಯವಾಡಿದರು.

ಇದೇ ವೇಳೆ ಮುಖ್ಯಮಂತ್ರಿಯವರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಅವರು, ರಾಜ್ಯದ ಅಭಿವೃದ್ಧಿ ಬಗ್ಗೆ ಕೇಂದ್ರ ಸರ್ಕಾರದಿಂದ ನೆರವು ಪಡೆಯುವ ನಿಟ್ಟಿನಲ್ಲಿ ಕೇವಲ ಸಚಿವರ ನಿಯೋಗವನ್ನು ಕಳುಹಿಸುವುದು ಸರಿಯಲ್ಲ. ಇನ್ನು ಮುಂದೆ ಇಂತಹ ವಿಷಯಗಳಿಗೆ ಸರ್ವ ಪಕ್ಷಗಳ ನಿಯೋಗವನ್ನು ಕರೆದೊಯ್ಯಬೇಕು ಎಂದು ಆಗ್ರಹಿಸಿದ್ದಾರೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಭಿನ್ನಮತ: ರೆಡ್ಡಿ ಬೆಂಬಲಿಗರಿಂದ ರಹಸ್ಯ ಚರ್ಚೆ
ಬೆಂಗಳೂರಿನಲ್ಲಿ ಅಸ್ಸಾಂನ 3 ಉಗ್ರರ ಸೆರೆ
ಸರ್ಕಾರಿ ಕಾಲೇಜು-ಎಲ್ಲರಿಗೂ ಪ್ರವೇಶ: ಲಿಂಬಾವಳಿ
ರಜಪೂತರ ಹೆಸರಲ್ಲಿ ಈತ ವಂಚಿಸಿದ್ದು 1,800ಕೋಟಿ !
ಅಭಿಷೇಕ್ ಮೃತದೇಹ ಪತ್ತೆಗಾಗಿ 'ಎಂಇಜಿ ಯೋಧರು'
'ಆ ಪುಣ್ಯಾತ್ಮನಿಗೆ ಓದುವುದಕ್ಕೆ ಬರಲ್ಲ'!: ಹಾಲಪ್ಪ ಕಿಡಿ