ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಕನ್ನಡ ಧ್ವಜ ಹಾರಾಟಕ್ಕೆ ಅಡ್ಡಗಾಲು ಇಲ್ಲ: ಯಡಿಯೂರಪ್ಪ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಕನ್ನಡ ಧ್ವಜ ಹಾರಾಟಕ್ಕೆ ಅಡ್ಡಗಾಲು ಇಲ್ಲ: ಯಡಿಯೂರಪ್ಪ
ಸುತ್ತೋಲೆ ಹಿಂಪಡೆಯಲು ಸಿಎಂ ಭರವಸೆ
NRB
ಕನ್ನಡ ರಾಜ್ಯೋತ್ಸವ ಸೇರಿದಂತೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ಕನ್ನಡ ಧ್ವಜ ಹಾರಿಸಬಾರದೆಂಬ ಸರ್ಕಾರದ ಆದೇಶಕ್ಕೆ ಕನ್ನಡ ಪರ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಯಡಿಯೂರಪ್ಪನವರು ಆದೇಶವನ್ನು ವಾಪಸ್ ಪಡೆಯುವುದಾಗಿ ಭರವಸೆ ನೀಡುವ ಮೂಲಕ ಕನ್ನಡ ಪರ ಸಂಘಟನೆಗಳ ಬೇಡಿಕೆಗೆ ಜಯ ದೊರೆತಂತಾಗಿದೆ.

ಸರ್ಕಾರಿ ಕಾರ್ಯಕ್ರಮಗಳಲ್ಲಿ ಕನ್ನಡ ಧ್ವಜ ಹಾರಿಸಬಾರದೆಂಬ ಸುತ್ತೋಲೆ ಆಡಳಿತಾರೂಢ ಬಿಜೆಪಿ ಸರ್ಕಾರದ ನಿರ್ಧಾರವಲ್ಲ, ಈ ಹಿಂದಿನ ಸರ್ಕಾರಗಳ ಸುತ್ತೋಲೆಯನ್ನೇ ಜಾರಿ ಮಾಡಲಾಗಿತ್ತು. ಇದೀಗ ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆಯಾಗದಂತೆ ಆ ಸುತ್ತೋಲೆಯನ್ನು ಹಿಂಪಡೆಯುವುದಾಗಿ ಯಡಿಯೂರಪ್ಪ ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದ್ದಾರೆ.

ಕನ್ನಡ ರಾಜ್ಯೋತ್ಸವ ಸೇರಿದಂತೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ಕನ್ನಡ ಧ್ವಜ ಹಾರಿಸಬಾರದು ಎಂಬ ಆದೇಶಕ್ಕೆ ರಾಜ್ಯಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿದ್ದುಲ್ಲದೇ, 24 ಗಂಟೆಯೊಳಗೆ ಆದೇಶ ಹಿಂಪಡೆಯದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಕನ್ನಡ ಪರ ಸಂಘಟನೆಗಳು ಎಚ್ಚರಿಕೆ ನೀಡಿದ್ದವು.

ಕನ್ನಡಿಗರ ಸ್ವಾಭಿಮಾನ ಸಂಕೇತವಾಗಿರುವ ಕನ್ನಡ ಧ್ವಜ ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾರಿಸದಂತೆ ಶನಿವಾರ ಕರ್ನಾಟಕ ಸರಕಾರ ಹೊರಡಿಸಿತ್ತು. ಸರಕಾರ ಹೊರಡಿಸಿರುವ ಕನ್ನಡ ವಿರೋಧಿ ಆದೇಶವನ್ನು 24 ಗಂಟೆಯಲ್ಲಿ ಹಿಂಪಡೆಯಬೇಕು. ಇಲ್ಲದಿದ್ದರೆ ಮುಂದಾಗುವ ಅನಾಹುತಗಳಿಗೆ ಸರ್ಕಾರವೇ ಹೊಣೆ ಎಂದು ಕರವೇ ಅಧ್ಯಕ್ಷ ನಾರಾಯಣಗೌಡ ಎಚ್ಚರಿಕೆ ನೀಡಿದ್ದರು. ಅಲ್ಲದೇ ಆದೇಶ ಹಿಂಪಡೆಯದಿದ್ದರೆ ಸರ್ಕಾರ ನಡೆಸುವ ಎಲ್ಲ ಕಾರ್ಯಕ್ರಮಗಳಲ್ಲಿ ಕಪ್ಪು ಬಟ್ಟೆ ಬಾವುಟ ಪ್ರದರ್ಶಿಸಲಾಗುವುದು ಎಂದು ಹೇಳಿದ್ದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಲೋಕಾಯುಕ್ತರ ವಿರುದ್ಧ ಹೂಡಿದ ದೂರು ವಾಪಸ್
ಜೇಟ್ಲಿ ಅಗತ್ಯವಿಲ್ಲ;ನಾನೇ ಬಗೆಹರಿಸುವೆ: ಯಡಿಯೂರಪ್ಪ
ರಾಜ್ಯದ ಅಭಿವೃದ್ಧಿಗೆ ನಾವು ಬದ್ಧ: ವೀರಪ್ಪ ಮೊಯ್ಲಿ
ಕನ್ನಡ ಧ್ವಜ ಹಾರಿಸಲು ಸರ್ಕಾರ ಅಡ್ಡಗಾಲು: ಕರವೇ ಕಿಡಿ
ಕೊನೆಗೂ ಸಿದ್ದರಾಮಯ್ಯಗೆ ಒಲಿದ 'ವಿಪಕ್ಷ ಗದ್ದುಗೆ'
ಅಸಮಾಧಾನ ಹೊರಹಾಕಿದ್ರೆ ಎಚ್ಚರ: ಡಿ.ವಿ.ಸದಾನಂದ ಗೌಡ