ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಸಿದ್ದರಾಮಯ್ಯ ಸರ್ಟಿಫಿಕೇಟ್ ಬೇಕಾಗಿಲ್ಲ: ಸಿಎಂ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಸಿದ್ದರಾಮಯ್ಯ ಸರ್ಟಿಫಿಕೇಟ್ ಬೇಕಾಗಿಲ್ಲ: ಸಿಎಂ
ರಾಜ್ಯದ ಆಡಳಿತಾರೂಢ ಬಿಜೆಪಿ ಸರ್ಕಾರವನ್ನು ಕೋಮುವಾದಿ ಎಂದು ಹೇಳಿಕೆ ನೀಡಿರುವ ಸಿದ್ದರಾಮಯ್ಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಿದ್ದರಾಮಯ್ಯನವರ ಸರ್ಟಿಫಿಕೇಟ್ ತಮಗೆ ಬೇಕಿಲ್ಲ ಎಂದು ತಿರುಗೇಟು ನೀಡಿದ್ದಾರೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯನವರು ಸುದ್ದಿಗಾರರೊಂದಿಗೆ ಮಾತನಾಡುತ್ತ, ಬಿಜೆಪಿ ಕೋಮುವಾದಿ ಪಕ್ಷ ಎಂದು ತಿಳಿಸಿದ್ದರು. ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿಗಳು, ನಮಗೆ ಅವರ ಸರ್ಟಿಫಿಕೇಟ್ ಬೇಕಾಗಿಲ್ಲ, ಚುನಾವಣೆಯಲ್ಲಿ ಜನರೇ ಸರ್ಟಿಫಿಕೇಟ್ ಕೊಟ್ಟಿದ್ದಾರೆ ಎಂದು ಹೇಳಿದರು.

ವಿರೋಧ ಪಕ್ಷಗಳ ಬೇಜವಾಬ್ದಾರಿ ಹೇಳಿಕೆ, ಟೀಕೆಗಳಿಗೆ ಗಮನ ಕೊಡದೆ ರಾಜ್ಯದ ಅಭಿವೃದ್ಧಿ ಕಡೆಗೆ ಹೆಚ್ಚಿನ ಗಮನ ಕೊಡುವುದಾಗಿ ಅವರು ಈ ಸಂದರ್ಭದಲ್ಲಿ ಹೇಳಿದರು.

ಅಲ್ಲದೇ ರಾಜ್ಯದ ಉಸ್ತುವಾರಿ ಹೊತ್ತಿರುವ ಅರುಣ್ ಜೇಟ್ಲಿ ಅವರು ಯಾವಾಗ ಬೇಕಾದರೂ ಆಗಮಿಸಬಹುದು, ಅವರ ಭೇಟಿಗೆ ನಾನಾ ಕಾರಣಗಳನ್ನು ಹುಡುಕಿ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಕನ್ನಡ ಧ್ವಜ ಹಾರಾಟಕ್ಕೆ ಅಡ್ಡಗಾಲು ಇಲ್ಲ: ಯಡಿಯೂರಪ್ಪ
ಲೋಕಾಯುಕ್ತರ ವಿರುದ್ಧ ಹೂಡಿದ ದೂರು ವಾಪಸ್
ಜೇಟ್ಲಿ ಅಗತ್ಯವಿಲ್ಲ;ನಾನೇ ಬಗೆಹರಿಸುವೆ: ಯಡಿಯೂರಪ್ಪ
ರಾಜ್ಯದ ಅಭಿವೃದ್ಧಿಗೆ ನಾವು ಬದ್ಧ: ವೀರಪ್ಪ ಮೊಯ್ಲಿ
ಕನ್ನಡ ಧ್ವಜ ಹಾರಿಸಲು ಸರ್ಕಾರ ಅಡ್ಡಗಾಲು: ಕರವೇ ಕಿಡಿ
ಕೊನೆಗೂ ಸಿದ್ದರಾಮಯ್ಯಗೆ ಒಲಿದ 'ವಿಪಕ್ಷ ಗದ್ದುಗೆ'