ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ರಾಜ್ಯ ಸರ್ಕಾರದ ಜತೆ ಸಂರ್ಘರ್ಷ ಇಲ್ಲ : ರೇವಣ್ಣ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ರಾಜ್ಯ ಸರ್ಕಾರದ ಜತೆ ಸಂರ್ಘರ್ಷ ಇಲ್ಲ : ರೇವಣ್ಣ
ಸರ್ಕಾರದೊಂದಿಗೆ ಸಂಘರ್ಷಕ್ಕಿಳಿಯದೆ ರಚನಾತ್ಮಕ ಪ್ರತಿಪಕ್ಷವಾಗಿ ಜೆಡಿಎಸ್ ಕೆಲಸ ನಿರ್ವಹಿಸಲಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ ರೇವಣ್ಣ ಭರವಸೆ ನೀಡಿದ್ದಾರೆ.

ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಗೊಂಡ ನಂತರ ವಿಧಾನಸೌಧದ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡು ಮಾತನಾಡಿದ ಅವರು, ಪಕ್ಷ ವಹಿಸಿರುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುವುದಾಗಿ ತಿಳಿಸಿದ ಅವರು ಪಕ್ಷದ ಎಲ್ಲ ಶಾಸಕರು ತಮಗೆ ಉತ್ತಮ ಸಹಕಾರ ನೀಡುವ ಭರವಸೆ ಇದೆ ಎಂದು ಹೇಳಿದ್ದಾರೆ.

ತಾವು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕನಾದ ಮೇಲೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಂಘರ್ಷ ಬೇಡ ಅಭಿವೃದ್ಧಿ ಪರ ಕೆಲಸ ಮಾಡೋಣ ಎಂದು ಸಂದೇಶ ಕಳುಹಿಸಿ ಕೋರಿಕೊಂಡಿದ್ದಾರೆ ಎಂದರು.

5 ಕೋಟಿ ಜನತೆಯ ಪ್ರತಿನಿಧಿಯಾಗಿ ಅವರು ಕೋರಿರುವ ಸಂದೇಶವನ್ನು ಪರಿಗಣಿಸಿದ್ದು, ಪಕ್ಷ ಯಾವುದೇ ಸಂಘರ್ಷಕ್ಕೆ ಇಳಿಯದೆ ಅಭಿವೃದ್ದಿ ದೃಷ್ಠಿಯಿಂದ ಕೆಲಸ ಮಾಡುವುದಾಗಿ ತಿಳಿಸಿದ್ದಾರೆ.

ರಾಜ್ಯ ಸರ್ಕಾರ ಒಂದು ವರ್ಷ ಪೂರ್ಣಗೊಳಿಸಿದ್ದು, ಇನ್ನು ನಾಲ್ಕು ವರ್ಷ ಕಾಲ ಉತ್ತಮ ಅಭಿವೃದ್ದಿ ಕೆಲಸ ಮಾಡಲು ನಮ್ಮ ಪಕ್ಷ ಸಂಪೂರ್ಣ ಸಹಕಾರ ನೀಡಲಿದೆ ಎಂದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಸರ್ಕಾರ ಬಲಿಷ್ಠವಾಗಿದೆ: ಬಿ.ಎಸ್.ಯಡಿಯೂರಪ್ಪ
ಪಕ್ಷದಲ್ಲಿ ಶಿಸ್ತು ಕಾಪಾಡಿ: ಅರುಣ್ ಜೇಟ್ಲಿ ಎಚ್ಚರಿಕೆ
ಸಿಎಂ ಮತ್ತು ನಮ್ಮ ನಡುವೆ ರಗಳೆ ಇಲ್ಲ: ರೆಡ್ಡಿ
ಮಹಾಲಿಂಗಂ ಬಳಿ ರಹಸ್ಯ ದಾಖಲೆ ಇರ್ಲಿಲ್ಲ: ನಾಗೇಶ್ವರ್
ಬಿಬಿಎಂಪಿ ಆಯುಕ್ತ ಡಾ.ಸುಬ್ರಹ್ಮಣ್ಯ ತಲೆದಂಡ?
ಎಚ್.ಡಿ.ಕುಮಾರಸ್ವಾಮಿ ಬಂಧನಕ್ಕೆ ಕೋರ್ಟ್ ವಾರಂಟ್