ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಜನರಿಗೆ ಅಭಿವೃದ್ಧಿ ಬೇಡ;ಹಣ-ಹೆಂಡವೇ ಮುಖ್ಯ: ಎಚ್‌ಡಿಕೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಜನರಿಗೆ ಅಭಿವೃದ್ಧಿ ಬೇಡ;ಹಣ-ಹೆಂಡವೇ ಮುಖ್ಯ: ಎಚ್‌ಡಿಕೆ
ಆಡಳಿತ ಪಕ್ಷದೊಂದಿಗೆ ಇನ್ನು ಮುಂದೆ ಸಂರ್ಘಷಕ್ಕೆ ಇಳಿಯುವುದಿಲ್ಲ. ಪಕ್ಷದ ಸಂಘಟನೆಯೊಂದೇ ಮುಖ್ಯ ಗುರಿ ಎಂದು ಹೇಳಿಕೆ ನೀಡಿದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತೆ ಆಡಳಿತಾರೂಢ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಪಕ್ಷ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಸರ್ಕಾರದ ಹಣದಲ್ಲಿ ವಿಕಾಸ ಸಂಕಲ್ಪ ಯಾತ್ರೆ ಕಾರ್ಯಕ್ರಮಕ್ಕೆ ಮುಂದಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಣ, ಹೆಂಡದ ಮುಂದೆ ಯಾವುದೇ ಒಳ್ಳೆಯ ಕೆಲಸ ನೆನಪಿಗೆ ಬರುವುದಿಲ್ಲ ಅನ್ನೋ ಅಂಶ ಕಳೆದ ಲೋಕಸಭಾ ಚುನಾವಣೆಯಲ್ಲಿ ಸಾಬೀತಾಗಿದೆ. ತಾವು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯಕ್ಕೆ ಸಾಕಷ್ಟು ಅಭಿವೃದ್ಧಿ ಮಾಡಿದ್ದರೂ ಕೂಡ ಜನರು ಅಭಿವೃದ್ಧಿ ಕಾರ್ಯವನ್ನು ಮರೆತು ಹಣ, ಹೆಂಡಕ್ಕೆ ಮಾರು ಹೋಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬಿಜೆಪಿ ಪಕ್ಷದ ಮುಖಂಡರು ತಾವು ಕೈಗೊಂಡಿರುವ ಅಭಿವೃದ್ಧಿ ಕೆಲಸಗಳನ್ನು ಮೆಚ್ಚಿ ಜನ ಮತ ಹಾಕಿದ್ದಾರೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಆದರೆ ಅದು ಸುಳ್ಳು. ಹಣ, ಹೆಂಡ ಬಲದ ಮೇಲೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಮುಂದೊಂದು ದಿನ ಬಿಜೆಪಿ ಸರ್ಕಾರದ ಆಡಳಿತಕ್ಕೆ ರೋಸಿ ಬಿಜೆಪಿ ವಿರುದ್ಧ ತಿರುಗಿ ಬೀಳುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಕೃಷ್ಣಯ್ಯ ಶೆಟ್ಟಿ ರಾಜೀನಾಮೆ: ಅಭಿಮಾನಿಗಳಿಂದ ಆಕ್ರೋಶ
ಬಿಬಿಎಂಪಿ ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿ ಸ್ಪರ್ಧೆ: ಎಚ್‌ಡಿಕೆ
ಮತ್ತೆ ಮೂವರಿಗೆ ಎಚ್‌1ಎನ್‌1 ಸೋಂಕು ಶಂಕೆ
ವಿದ್ಯುತ್ ಬಳಕೆದಾರರಿಗೆ 'ದರ ಏರಿಕೆ ಶಾಕ್'
ನಿಗಮ-ಮಂಡಳಿಯೂ ಪುನಾರಚನೆ: ಯಡಿಯೂರಪ್ಪ
ಸಚಿವ ಸಂಪುಟ ಸೇರ್ಪಡೆಗೆ ವಿ.ಸೋಮಣ್ಣ ಹಾದಿ ಸುಗಮ