ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ನ್ಯಾ.ನಾರಿಮನ್ ಬದಲಾವಣೆ ಇಲ್ಲ: ಬೊಮ್ಮಾಯಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ನ್ಯಾ.ನಾರಿಮನ್ ಬದಲಾವಣೆ ಇಲ್ಲ: ಬೊಮ್ಮಾಯಿ
ಜಲವಿವಾದದ ಸಂಬಂಧ ರಾಜ್ಯದ ಪರ ನ್ಯಾಯವಾದಿಗಳ ತಂಡದ ಮುಖ್ಯಸ್ಥ ಸುಪ್ರಿಂ ಕೋರ್ಟ್‌ನ ಹಿರಿಯ ನ್ಯಾಯವಾದಿ ಫಾಲಿ ಎಸ್. ನಾರಿಮನ್ ಅವರನ್ನು ಬದಲಾಯಿಸುವ ಪ್ರಸ್ತಾಪ ಸದ್ಯ ಸರ್ಕಾರದ ಮುಂದಿಲ್ಲ ಎಂದು ಜಲಸಂಪನ್ಮೂಲ ಸಚಿವ ಬಸವರಾಜ್ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನಂತೆ ಆ ಸ್ಥಾನದಲ್ಲಿ ನಾರಿಮನ್ ಅವರೇ ಮುಂದುವರಿಯುತ್ತಾರೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ತಿಳಿಸಿದ್ದಾರೆ.

ಉದಯ ಹೊಳ್ಳ ಅವರು ಅಡ್ವೊಕೇಟ್ ಜನರಲ್ ಆಗಿದ್ದರು. ಹೀಗಾಗಿ ಕೃಷ್ಣ ಮತ್ತು ಕಾವೇರಿ ವಿವಾದ ಕುರಿತು ಕಾನೂನು ತಂಡದ ಸದಸ್ಯರಾಗಿದ್ದರು. ಇದೀಗ ಅವರು ಅಡ್ವೊಕೇಟ್ ಜನರಲ್ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಹಾಗಾಗಿ ಸದಸ್ಯರಾಗುವ ಹಂಬಲ ಇದೆಯೋ ಇಲ್ಲವೊ ಎಂಬ ಬಗ್ಗೆ ಅಭಿಪ್ರಾಯ ಪಡೆದು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು. ಆದರೆ ತಂಡದ ಮುಖ್ಯಸ್ಥರಾಗಿ ನಾರಿಮನ್ ಅವರೇ ಮುಂದುವರಿಯುತ್ತಾರೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯದಲ್ಲಿ ಮಳೆ ಕ್ಷೀಣಿಸಿದ್ದರಿಂದ ಮೋಡ ಬಿತ್ತನೆ ಮಾಡುವ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಇನ್ನೆರಡು ವಾರದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಬಗ್ಗೆ ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಅದನ್ನು ಪರಿಶೀಲಿಸಿ ಸರ್ಕಾರ ತನ್ನ ಮುಂದಿನ ನಿರ್ಧಾರ ಪ್ರಕಟಿಸಲಿದೆ ಎಂದು ಹೇಳಿದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಮಳೆಗಾಗಿ 34ಸಾವಿರ ದೇವಸ್ಥಾನಗಳಲ್ಲಿ ಪೂಜೆ: ಸೋಮಣ್ಣ
ಮೈಸೂರು: ಭುಗಿಲೆದ್ದ ಕೋಮುಗಲಭೆಗೆ ಮೂರು ಬಲಿ
ವ್ಯಕ್ತಿ ಪೂಜೆ ಬೇಡ;ಪಕ್ಷ ಪೂಜೆ ಮಾಡಿ: ಡಿಕೆಶಿ
ಕರಾವಳಿಯಲ್ಲಿ ಬಿರುಸುಗೊಂಡ ಮುಂಗಾರು ಮಳೆ
ಲೋಡ್ ಶೆಡ್ಡಿಂಗ್: ಸರ್ಕಾರಕ್ಕೆ ನೋಟಿಸ್
ರಾಜ್ಯದಲ್ಲಿ 2,300ಮೆ.ವ್ಯಾಟ್ ವಿದ್ಯುತ್ ಕೊರತೆ: ಈಶ್ವರಪ್ಪ