ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಕನ್ನಡ: ತ್ವರಿತ ವಿಚಾರಣೆಗೆ ಸು.ಕೋರ್ಟಿಗೆ ಮನವಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಕನ್ನಡ: ತ್ವರಿತ ವಿಚಾರಣೆಗೆ ಸು.ಕೋರ್ಟಿಗೆ ಮನವಿ
ಖಾಸಗಿ ಅನನುದಾನಿತ ಶೈಕ್ಷಣಿಕ ಸಂಸ್ಥೆಗಳಲ್ಲಿ ಬೋಧನಾ ಮಾಧ್ಯಮಕ್ಕೆ ಸಂಬಂಧಿಸಿದಂತೆ ತನ್ನ ಆದೇಶ ಪಾಲಿಸಲು ವಿಫಲವಾದ ರಾಜ್ಯ ಸರಕಾರವನ್ನು ಹೈಕೋರ್ಟು ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡಿರುವ ಹಿನ್ನೆಲೆಯಲ್ಲಿ, ಸುಪ್ರೀಂ ಕೋರ್ಟಿನಲ್ಲಿ ಈ ಕುರಿತು ತಾನು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನಿಗದಿತ ಜುಲೈ 21ಕ್ಕೆ ಮೊದಲೇ ನಡೆಸುವಂತೆ ವಿಶೇಷ ರಜಾಕಾಲದ ಅರ್ಜಿಯನ್ನು ಬಿಜೆಪಿ ಸರಕಾರ ಸಲ್ಲಿಸಲಿದೆ.

ಈ ಬಗ್ಗೆ ಸುದ್ದಿಗಾರರಿಗೆ ಗುರುವಾರ ಮಾಹಿತಿ ನೀಡಿದ ಪ್ರಾಥಮಿಕ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ, ಹೈಕೋರ್ಟ್ ನಿರ್ದೇಶನಕ್ಕೆ ತಡೆ ಕೋರಿ ಸರಕಾರ ಸಲ್ಲಿಸಿದ್ದ ಅರ್ಜಿಯು ಸುಪ್ರೀಂ ಕೋರ್ಟಿನಲ್ಲಿ ಜು.21ಕ್ಕೆ ವಿಚಾರಣೆಗೆ ಬರಲಿದೆ. ಆದರೆ ಇದನ್ನು ಜುಲೈ 13ರೊಳಗೆ ನಡೆಸುವಂತೆ ಮನವಿ ಸಲ್ಲಿಸುವುದಾಗಿ ತಿಳಿಸಿದರು.

ಕರ್ನಾಟಕ ರಾಜ್ಯ ಅನನುದಾನಿತ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟ (ಕುಸ್ಮಾ) ಸರಕಾರದ ವಿರುದ್ಧ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆ ಸಂದರ್ಭದಲ್ಲಿ, ಆದೇಶ ಅನುಷ್ಠಾನಗೊಳಿಸಲು ಕಾಲಾವಕಾಶ ಕೋರಿದ ಸರಕಾರದ ಮನವಿಯನ್ನು ಹೈಕೋರ್ಟು ತಳ್ಳಿ ಹಾಕಿತ್ತು ಎಂದು ಸಚಿವರು ಹೇಳಿದರು.

ಈ ಹಿನ್ನೆಲೆಯಲ್ಲಿ ಜುಲೈ 13ರೊಳಗೆ ನ್ಯಾಯಾಲಯಕ್ಕೆ ಹಾಜರಾಗಿ ಅಫಿದವಿತ್ ಸಲ್ಲಿಸುವಂತೆ ರಾಜ್ಯ ಮುಖ್ಯ ಕಾರ್ಯದರ್ಶಿಗೆ ಹೈಕೋರ್ಟು ಬುಧವಾರ ನೋಟಿಸ್ ಜಾರಿ ಮಾಡಿತ್ತು.

ಎಲ್ಲ ಪ್ರಾಥಮಿಕ ಶಾಲೆಗಳಲ್ಲಿ ಬೋಧನಾ ಕ್ರಮವಾಗಿ ಕನ್ನಡ ಕಡ್ಡಾಯ ಮಾಡಿದ್ದ ಸರಕಾರದ ಆದೇಶಕ್ಕೆ ತಡೆಯಾಜ್ಞೆ ತರುವಲ್ಲಿ 'ಕುಸ್ಮಾ' ಯಶಸ್ವಿಯಾಗಿತ್ತು. ಆದರೆ ಕಳೆದ ವರ್ಷದ ಆದೇಶವನ್ನು ಅನುಷ್ಠಾನಗೊಳಿಸಿಲ್ಲ ಎಂದು 'ಕುಸ್ಮಾ' ಹೈಕೋರ್ಟಿನಲ್ಲಿ ಸರಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿತ್ತು. ಆ ಬಳಿಕ ಸರಕಾರಕ್ಕೆ ಹೈಕೋರ್ಟ್ ಛೀಮಾರಿ ಹಾಕಿತ್ತು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಪಿಎಫ್ಐ ಜೈಲ್‌ಭರೋ: ಮತ್ತೆ ಮೈಸೂರು ಉದ್ವಿಗ್ನ
ಮೈಸೂರು ಗಲಭೆ: ಸದನದಲ್ಲಿ ಗದ್ದಲ, ಮುಂದೂಡಿಕೆ
ಮಂಗಳೂರು ರೈಲು ಕೇರಳಕ್ಕೆ: ಜು.25ರಂದು ರೈಲು ತಡೆ
ಸಂವಿಧಾನ ಕಾಪಾಡುವುದು ನನ್ನ ಹೊಣೆಗಾರಿಗೆ: ರಾಜ್ಯಪಾಲ
ಹೊಗೇನಕಲ್: ಪ್ರಧಾನಿ ಬಳಿಗೆ ನಿಯೋಗ
ಕೆಲವು ಸಚಿವರು ಸೋಂಬೇರಿಗಳು: ಯಡಿಯೂರಪ್ಪ