ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಕೆಎಫ್‌ಡಿ, ಪಿಎಫ್ಐ ನಿಷೇಧಕ್ಕೆ ಸದಾನಂದಗೌಡ ಒತ್ತಾಯ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಕೆಎಫ್‌ಡಿ, ಪಿಎಫ್ಐ ನಿಷೇಧಕ್ಕೆ ಸದಾನಂದಗೌಡ ಒತ್ತಾಯ
ಕೋಮುಸೌಹಾರ್ದ ಕೆಡಿಸುತ್ತಿರುವ ಕೆಎಫ್‌ಡಿ ಹಾಗೂ ಪಿಎಫ್ಐ ಸಂಘಟನೆಗಳನ್ನು ನಿಷೇಧಿಸುವ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಚರ್ಚಿಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಡಿ.ವಿ. ಸದಾನಂದಗೌಡ ತಿಳಿಸಿದ್ದಾರೆ.

ಗಲಭೆ ಹಿನ್ನೆಲೆಯಲ್ಲಿ ಗಾಯಗೊಂಡಿರುವವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಎಫ್‌ಡಿ ಹಾಗೂ ಪಿಎಫ್ಐ ಸಂಘಟನೆಗಳು ಗಲಭೆಗೆ ಕುಮ್ಮಕ್ಕು ನೀಡಿದ್ದು ಮೇಲ್ನೋಟಕ್ಕೆ ಸಾಬೀತಾಗಿದೆ. ಈ ನಿಟ್ಟಿನಲ್ಲಿ ಈ ಸಂಘಟನೆಗಳನ್ನು ನಿಷೇಧಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿ ಹಾಗೂ ಗೃಹ ಸಚಿವರೊಂದಿಗೆ ಶೀಘ್ರವೇ ಮಾತುಕತೆ ನಡೆಸಿ ಸೂಕ್ತ ಕ್ರಮಕೈಗೊಳ್ಳುವಂತೆ ತಿಳಿಸಲಾಗುವುದು ಎಂದು ಎಂದು ಅವರು ಹೇಳಿದರು.

ಇದೇ ವೇಳೆ ರಾಜ್ಯ ಸರ್ಕಾರ ಒಂದು ವರ್ಷವನ್ನು ಪೂರೈಸಿದ್ದು, ಹಲವು ಸಚಿವರು ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ. ಕೆಲವರ ಸಾಧನೆ ತೃಪ್ತಿಕರವಾಗಿಲ್ಲ. ಈ ನಿಟ್ಟಿನಲ್ಲಿ ಪಕ್ಷದ ಕಾರ್ಯಕಾರಿಣಿಯಲ್ಲಿ ಅಂಥ ಸಚಿವರಿಗೆ ಸೂಚನೆ ನೀಡಲಾಗುತ್ತದೆ ಎಂದು ಅವರು ತಿಳಿಸಿದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಕನ್ನಡ: ತ್ವರಿತ ವಿಚಾರಣೆಗೆ ಸು.ಕೋರ್ಟಿಗೆ ಮನವಿ
ಪಿಎಫ್ಐ ಜೈಲ್‌ಭರೋ: ಮತ್ತೆ ಮೈಸೂರು ಉದ್ವಿಗ್ನ
ಮೈಸೂರು ಗಲಭೆ: ಸದನದಲ್ಲಿ ಗದ್ದಲ, ಮುಂದೂಡಿಕೆ
ಮಂಗಳೂರು ರೈಲು ಕೇರಳಕ್ಕೆ: ಜು.25ರಂದು ರೈಲು ತಡೆ
ಸಂವಿಧಾನ ಕಾಪಾಡುವುದು ನನ್ನ ಹೊಣೆಗಾರಿಗೆ: ರಾಜ್ಯಪಾಲ
ಹೊಗೇನಕಲ್: ಪ್ರಧಾನಿ ಬಳಿಗೆ ನಿಯೋಗ